21.1 C
Sidlaghatta
Thursday, January 15, 2026

ಶುದ್ಧ ಕುಡಿಯುವ ನೀರಿನ ಘಟಕ ಸಾರ್ವಜನಿಕ ಆಸ್ತಿ

- Advertisement -
- Advertisement -

ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ರಾಜಕೀಯ ಬೆರಸದೇ ಗ್ರಾಮದ ಮುಖಂಡರೂ ಸೇರಿದಂತೆ ನಾಗರೀಕರು ಒಗ್ಗೂಡಿ ಸಹಕರಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಾಗುತ್ತವೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಹಾಗು ಹೊಸಪೇಟೆ ಗ್ರಾಮಗಳಲ್ಲಿ ಬುಧವಾರ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಹಾಗು ಹೊಸಪೇಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕೇಂದ್ರದ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುತ್ತಿದ್ದು ತಾಲ್ಲೂಕಿನಾಧ್ಯಂತ ೧೦೯ ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿದ್ದು ಹಂತ ಹಂತವಾಗಿ ಎಲ್ಲವನ್ನೂ ನಿರ್ಮಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿ, ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗು ಉತ್ತಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಸರ್ಕಾರ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ ಹಾಗು ಅಂಗನವಾಡಿ ಕೇಂದ್ರಗಳು ಸಾರ್ವಜನಿಕ ಆಸ್ತಿಯಾಗಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಗ್ರಾಮದಲ್ಲಿ ನಡೆಯುವ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ನಾಗರಿಕರು ಗಮನಹರಿಸುವುದರೊಂದಿಗೆ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ತಾಲ್ಲೂಕು ಪಂಚಾಯತಿ ಸದಸ್ಯೆ ಶೋಭ, ಕುಂಬಿಗಾನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಆಂಜಿನಪ್ಪ, ಹೊಸಪೇಟೆ ಗ್ರಾಮ ಪಂಚಾಯತಿ ಸದಸ್ಯರಾದ ರಮೇಶ್, ದ್ಯಾವಮ್ಮ, ಮೀನಾಕ್ಷಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಪಾಪಣ್ಣ, ಬಿ.ಟಿ.ರವಿಕುಮಾರ್, ಶ್ರೀನಿವಾಸಗೌಡ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!