ಶಿಡ್ಲಘಟ್ಟದ ಆಶಾಕಿರಣ ಅಂಧ ಮಕ್ಕಳ ಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆದಿದ್ದು, ಎಲ್ಲರೂ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
1992 ರಿಂದ ಪ್ರಾರಂಭವಾದ ಅಂಧಮಕ್ಕಳ ಶಾಲೆಯು ತಾಲ್ಲೂಕು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಅಂಧ ಮಕ್ಕಳಿಗೆ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿದೆ. 2009 ರಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಮೊದಲು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆದರು. ಅಂದಿನಿಂದ ಈ ಶಾಲೆಯು ಪ್ರತಿ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶವನ್ನು ಪಡೆಯುತ್ತಿದ್ದು ಮಾದರಿಯಾಗಿದೆ.
‘ಕಣ್ಣಿರದಿದ್ದರೂ ಮಕ್ಕಳಲ್ಲಿ ಅಪಾರ ಪ್ರತಿಭೆಯನ್ನು ಹೊಂದಿರುತ್ತಾರೆ. ಹೆಚ್ಚು ಅಂಕಗಳನ್ನು ಪಡೆದು ಮಕ್ಕಳು ಆತ್ಮವಿಶ್ವಾಸದಿಂದ ಮುಂದೆ ಟೀಚರಾಗುತ್ತೇನೆ, ಸ್ವಂತ ಉದ್ಯೋಗವನ್ನು ಕೈಗೊಳ್ಳುತ್ತೇನೆ ಎಂದೆಲ್ಲಾ ಹೇಳುವುದನ್ನು ಕಂಡಾಗ ಹೆಮ್ಮೆ ಎನಿಸುತ್ತದೆ” ಎಂದು ಶಾಲೆಯ ಸಂಯೋಜಕ ಗೋಪಾಲಯ್ಯ ತಿಳಿಸಿದರು.
ಈ ಬಾರಿ ಎಂಟು ಮಂದಿ ಅಂಧ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು:
ಪಿ. ಗೌತಮಿ(೪೬೨), ಆರ್.ಹರೀಶ್(೪೬೨), ಸಂದೀಪ್(೪೫೪), ನಾಗಾರ್ಜುನ(೪೪೭), ಬಸವರಾಜು(೪೧೯), ಆರ್.ಜ್ಯೋತಿ(೪೧೪), ಎಲ್.ಸುನಿಲ್(೪೦೦), ಬಿ.ಪವನ್(೩೯೬)
- Advertisement -
- Advertisement -
- Advertisement -