ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ತಾಲ್ಲೂಕಿನ ಕಾಕಚೊಕ್ಕಂಡಹಳ್ಳಿ ಗ್ರಾಮದ ಶ್ರೀವೆಂಕಟರವಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ತಾಲ್ಲೂಕಿನಲ್ಲಿ ಹೆಸರುವಾಸಿಯಾಗಿರುವ ವೆಂಕಟರವಣಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಜೊತೆಗೆ ಹೋಮ, ಹವನ, ದೇವರಿಗೆ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿತ್ತು, ಸುತ್ತಮುತ್ತಲಿನ ಹಳ್ಳಿಗಳಿಂದ ನೂರಾರು ಮಂದಿ ಭಕ್ತಾದಿಗಳು ದೇವಾಲಯದಲ್ಲಿ ಪೂಜೆಗಳನ್ನು ಸಲ್ಲಿಸಿದರು. ನೆರೆದಿದ್ದ ಭಕ್ತರಿಗೆ ತೀರ್ಥಪ್ರಸಾದಗಳನ್ನು ವಿನಿಯೋಗ ಮಾಡಲಾಯಿತು.
ಗ್ರಾಮದ ಮುಖಂಡರಾದ ರಾಜಣ್ಣ, ಎಚ್.ನಾರಾಯಣಸ್ವಾಮಿ, ಪ್ರಕಾಶ್, ನಟರಾಜು, ಪೂಜಾರಿ ನಾರಾಯಣಸ್ವಾಮಿ, ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -