ಚಿಕ್ಕಬಳ್ಳಾಪುರದ ಚದಲಪುರದಲ್ಲಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಶ್ರೀರಾಮ ಸೇನೆಯ ತಾಲ್ಲೂಕು ಘಟಕ ಬೆಂಬಲಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾದ್ಯಂತ ಶ್ರೀರಾಮಸೇನೆಯ ಕಾರ್ಯಕರ್ತರು ಶಾಶ್ವತ ನೀರಾವರಿ ಹೋರಾಟಕ್ಕೆ ವಿವಿಧ ಭಾಗಗಳಿಂದ ಚದಲಪುರಕ್ಕೆ ತೆರಳಿದ ಸಂದರ್ಭದಲ್ಲಿ ಚಿಂತಾಮಣಿಯಿಂದ ಬಂದ ಕಾರ್ಯಕರ್ತರು ಶಿಡ್ಲಘಟ್ಟದ ಕಾರ್ಯಕರ್ತರೊಂದಿಗೆ ಸೇರಿ ಮೆರವಣಿಗೆ ಮಾಡಿ ನಂತರ ಜೊತೆಯಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿದರು.
ಶಾಶ್ವತ ನೀರಾವರಿ ಕಾಮಗಾರಿ ತ್ವರಿತವಾಗಿ ನಡೆಯಬೇಕು, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೆರವಾಗಬೇಕು, ವಿದ್ಯುತ್ ಸಮಸ್ಯೆಯನ್ನು ನಿವಾರಿಸಬೇಕು. ಮಹಿಳೆಯರಿಗೆ ರಕ್ಷಣೆ ಸಿಗಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ಧಿಷ್ಟಾವಧಿ ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲಿಸಲು ತೆರಳಿದರು.
ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ್, ಖಜಾಂಚಿ ಆರ್.ವಿ.ರಾಜಣ್ಣ, ತಾಲ್ಲೂಕು ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಸುಧಾಕರ್, ಕಾರ್ಯದರ್ಶಿ ಮುನಿರಾಜು, ನಾರಾಯಣಸ್ವಾಮಿ, ನರಸಿಂಹಮೂರ್ತಿ, ಸುಮನ್, ರಮೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -