30.1 C
Sidlaghatta
Saturday, April 1, 2023

ಶ್ರೀ ಕೃಷ್ಣಜಯಂತಿ

- Advertisement -
- Advertisement -

ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡತÀಹ ಶ್ರೇಷ್ಠ ವ್ಯಕ್ತಿ ಎಂದು ಶಾಸಕ ಎಂ. ರಾಜಣ್ಣ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ನಗರದ ತಾಲೂಕು ಕಛೇರಿಯ ಬಳಿ ಆಯೋಜಿಸಲಾಗಿದ್ದ ಶ್ರೀ ಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದಲ್ಲಿ ಧರ್ಮದ ಸ್ಥಾಪನೆಗಾಗಿ ಅಧರ್ಮದ ಹಾದಿಯಲ್ಲಿದ್ದವರನ್ನೆಲ್ಲಾ ನಾಶ ಮಾಡಿ, ಜಗತ್ತಿಗೆ ಗೀತೆಯನ್ನು ಬೋದಿಸಿ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟಂತಹ ಶ್ರೀಕೃಷ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ ಬದಲಿಗೆ ಮನುಕುಲಕ್ಕೇ ಸೇರುವಂಥಹ ಶ್ರೇಷ್ಠ ವ್ಯಕ್ತಿ ಎಂದ ಅವರು ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವುದು ಸಮಾಜದ ಏಳಿಗೆಗೆ ಅತ್ಯಗತ್ಯ ಎಂದು ಹೇಳಿದರು.
ತಹಶೀಲ್ದಾರ್ ಕೆ.ಎಂ.ಮನೋರಮಾ, ತಾ.ಪಂ ಇಓ ವೆಂಕಟೇಶ್, ತಾ.ಪಂ ಅಧ್ಯಕ್ಷ ಕೆ. ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ಡಿ.ಟಿ. ಸತ್ಯನಾರಾಯಣರಾವ್, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಕೆ. ಕೇಶವಮೂರ್ತಿ, ಮುಖಂಡರಾದ ಜಗ್ಗಪ್ಪ, ಎಸ್.ಎ. ನಾರಾಯಣಸ್ವಾಮಿ, ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!