20.1 C
Sidlaghatta
Sunday, January 18, 2026

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತೋತ್ಸವ

- Advertisement -
- Advertisement -

ಸಮಾಜದಲ್ಲಿನ ಜಾತಿಪದ್ಧತಿಯನ್ನು ಹೋಗಲಾಡಿಸಲು ಹೋರಾಡಿದ ಮಹಾನ್ ವ್ಯಕ್ತಿ ಅಂಬಿಗರ ಚೌಡಯ್ಯ ಎಂದು ಕ್ಷೇತ್ರ ಶಿಕ್ಷಣಾದಿಕಾರಿ ರಘುನಾಥ ರೆಡ್ಡಿ ತಿಳಿಸಿದರು.
ನಗರದ ಮಿನಿ ವಿಧಾನ ಸೌಧದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮದಲ್ಲಿ ಪಾಲ್ಗೂಂಡು ಮಾತನಾಡಿದ ಅವರು 12ನೇ ಶತಮಾನದಲ್ಲಿ ಬಸವಣ್ಣವನರು ಅನುಭವ ಮಂಟಪ ಸ್ಥಾಪನೆ ಮಾಡಿದ್ದು ಅದರಲ್ಲಿ ಸ್ಥಾನ ಪಡೆದಿದ್ದ ಅಂಬಿಗರ ಚೌಡಯ್ಯ, ಸಮಾಜದಲ್ಲಿನ ಮೂಡನಂಬಿಕೆಗಳ ವಿರುದ್ಧ ಸಿಡಿದೆದ್ದು ತನ್ನ ವಚನ ಸಾಹಿತ್ಯದ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ ಮಹಾನ್ ವ್ಯಕ್ತಿಯಾಗಿದ್ದು, ಅವರ ತತ್ವಗಳು ಒಂದು ಸಮಾಜಕ್ಕೆ, ಒಂದು ಜಾತಿಗೆ ಸೀಮಿತವಾಗದೆ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸಿ ಸಮಾಜದ ಒಳಿತಿಗಾಗಿ ಶ್ರಮಿಸಬೇಕೆಂದು, ಆ ಕಾಲದಲ್ಲಿ ವಿದ್ಯೆಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು, ಜಾತಿ, ಮತ ಬಡವ, ಶ್ರೀಮಂತ ಎಂಬ ಭೇದವಿಲ್ಲದೆ ಎಲ್ಲರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಿ ಸಮಾಜದಲ್ಲಿ ಏಳಿಗೆಗಾಗಿ ಸಹಕರಿಸಿ ಎಂದು ಕರೆನೀಡಿದರು.

ಜನಾಂಗದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು,ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು
ಜನಾಂಗದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು,ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು

ಇದೇ ಸಂದರ್ಭದಲ್ಲಿ ಬೆಸ್ತ ಜನಾಂಗದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು,ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಮತ್ತು ಜನಾಂಗದ ಏಳಿಗೆಗಾಗಿ ಶ್ರಮಿಸಿದ ಹಿರಿಯ ನಾಗರೀಕರಾದ ನ್ಯಾತಪ್ಪ ಅವರನ್ನು ಸನ್ಮಾನಿಸಲಾಯಿತು.
ಸೆಕೆಂಡ್ ಗ್ರೇಡ್ ತಹಸಿಲ್ದಾರ್ ವಾಸುದೇವ ಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂತಪ್ಪ, ಜಿಲ್ಲಾ ಮತ್ತು ತಾಲೂಕು ಬೆಸ್ತರ ಸಂಘದ ಅದ್ಯಕ್ಷ ಜಯರಾಂ, ಕಾರ್ಯದರ್ಶಿ ವೆಂಕಟಾದ್ರಿ, ಗೌರವಾದ್ಯಕ್ಷ ನ್ಯಾತಪ್ಪ, ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಜಂಗಮಕೋಟೆ ಬೆಸ್ತರ ಸಂಘದ ಅಧ್ಯಕ್ಷ ವೆಂಕಟೇಶ್, ಮತ್ತಿತತರು ಕಾರ್ಯಕ್ರದಮಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!