27.1 C
Sidlaghatta
Monday, July 14, 2025

ಶ್ರೀ ಪಟಾಲಮ್ಮದೇವಿ ಮತ್ತು ಶ್ರೀ ವೀರಸೊಣ್ಣಮ್ಮದೇವಿಯವರ ಉಟ್ಲು ಮಹೋತ್ಸವ

- Advertisement -
- Advertisement -

ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಪಟಾಲಮ್ಮದೇವಿ ಮತ್ತು ಶ್ರೀ ವೀರಸೊಣ್ಣಮ್ಮದೇವಿಯವರ ರಥೋತ್ಸವ ಮತ್ತು ಉಟ್ಲು ಮಹೋತ್ಸವ ಶುಕ್ರವಾರ ನಡೆಯಿತು.
ಮಂಗಳ ವಾದ್ಯಗಳು, ವಿವಿಧ ವೇಷಧಾರಿಗಳು, ವೀರಗಾಸೆ ನೃತ್ಯದೊಂದಿಗೆ ರಥವನ್ನು ಗ್ರಾಮಸ್ಥರು ಹೆಂಗಸರು, ಮಕ್ಕಳು, ಹಿರಿಯರು, ಕಿರಿಯರು ಎಂಬ ಬೇಧವಿಲ್ಲದೆ ಎಳೆದರು. ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಿ ರಥವು ದೇವಾಲಯದ ಬಳಿಗೆ ಸಾಗಿತು. ದೇವಾಲಯದ ಬಳಿ ಬತ್ತಾಸು, ಬುರುಗು, ಖಾರ, ಬಳೆ, ಪಾತ್ರೆ, ಆಟದ ಸಾಮಾನುಗಳು, ತಿಂಡಿ ತಿನಿಸುಗಳು, ಎಳೆನೀರು, ಹಣ್ಣಿನ ಅಂಗಡಿಗಳು, ಪಾನೀಯಗಳು ಇತ್ಯಾದಿ ಮಾರುವ ವಿವಿಧ ಅಂಗಡಿಗಳು ಜನರನ್ನು ಆಕರ್ಷಿಸುತ್ತಿದ್ದವು. ದೇವಾಲಯದಲ್ಲಿ ಪ್ರಸಾದ ವಿನಿಯೋಗ ಹಾಗೂ ದೇವಾಲಯದ ಆವರಣದಲ್ಲಿ ಉಚಿತ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಆಗಮಿಸಿದ್ದರು. ಸುತ್ತಲಿನ ಗ್ರಾಮಸ್ಥರು ಪಾನಕ ಬಂಡಿಗಳನ್ನು ತಂದು ಬಿಸಿಲಲ್ಲಿ ಸುಸ್ತಾದವರಿಗೆಲ್ಲ ಪಾನಕ ಮತ್ತು ಹೆಸರುಬೇಳೆ ಉಚಿತವಾಗಿ ವಿತರಿಸುತ್ತಿದ್ದರು.
ಸಂಜೆ ಅಮ್ಮನವರ ಕ್ಷೀರ ಉಟ್ಲು ಮತ್ತು ಕಾಯಿ ಉಟ್ಲು ಮಹೋತ್ಸವ ನಡೆಯಿತು. ಡೊಳ್ಳು ಕುಣಿತ ಮತ್ತು ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ನೋಡಲು ಸುತ್ತ ಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸಿದ್ದರು. ರಾತ್ರಿ ‘ಸಾಸುಲು ಚಿನ್ನಮ್ಮ’ ನಾಟಕವನ್ನು ಪ್ರದರ್ಶಿಸಲಾಯಿತು.
ಶ್ರೀ ಪಟಾಲಮ್ಮದೇವಿ ಮತ್ತು ಶ್ರೀ ವೀರಸೊಣ್ಣಮ್ಮದೇವಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರು ವಿವಿಧ ಗ್ರಾಮಗಳ ಮುಖಂಡರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!