ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಶಿಡ್ಲಘಟ್ಟ ಶಾಖೆಯ ವತಿಯಿಂದ ರಥಸಪ್ತಮಿ ಪ್ರಯುಕ್ತ ವಿಶೇಷವಾಗಿ ಯೋಗ ಬಂಧು-ಭಗಿನಿಯರಿಂದ ಸೂರ್ಯನಮಸ್ಕಾರಗಳನ್ನು ಮಾಡುವುದರ ಮೂಲಕ ಆಚರಿಸಲಾಯಿತು.
ಬೆಳಗ್ಗೆ ಸೂರ್ಯೋದಯಕ್ಕೆ ಮುಂಚಿತವಾಗಿ ಸೂರ್ಯ ಭಗವಂತನ ಚಿತ್ರಪಠಕ್ಕೆ ಪೂಜೆ ಸಲ್ಲಿಸುವುದರಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಒಟ್ಟಾಗಿ 60 ಜನ ಯೋಗ ಬಂಧು-ಭಗಿನಿಯರು ಸೇರಿ 20,421 ಸೂರ್ಯನಮಸ್ಕಾರಗಳನ್ನು ಮಾಡಿದರು. ನಂತರ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಯೋಗ ನಡಿಗೆಯನ್ನು ಆಯೋಜಿಸಲಾಯಿತು. ನಂತರ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜಿಯನ್ನು ಸಲ್ಲಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕರಾದ ಸುಂದರಾಚಾರಿ, ಅಧ್ಯಕ್ಷರಾದ ಶ್ರೀ ಶಂಕರ್, ಪ್ರಧಾನ ಕಾರ್ಯದರ್ಶಿ ಪಿ.ಶ್ರೀಕಾಂತ್, ಸಂಘಟನಾ ಕಾರ್ಯದರ್ಶಿ ಶ್ರೀ ಲಕ್ಷ್ಮಣ, ಹಾಗೂ ಹಿರಿಯರಾದ ಸೋಮಣ್ಣ, ಎಲ್ ಕೇಶವ ಮೂರ್ತಿ ಹಾಗೂ ಸಮಿತಿಯ ಕಾರ್ಯಕರ್ತರು ಹಾಗೂ ಯೋಗ ಬಂಧು-ಭಗಿನಿಯರು ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -