ಶ್ರೀ ಪೂಜಮ್ಮ ದೇವಿಯ ಕರಗಮಹೋತ್ಸವ

- Advertisement -
- Advertisement -

ಪುರಾಣ ಪ್ರಸಿಧ್ದ ಶ್ರೀ ಪೂಜಮ್ಮ ದೇವಿಯ ದೇವಾಲಯದಲ್ಲಿ ಹುಣ್ಣಿಮೆ ಹಬ್ಬದ ಅಂಗವಾಗಿ ಕರಗಮಹೋತ್ಸವ ಭಾರಿ ವಿಜೃಂಭಣೆಯಿಂದ ನೆರವೇರಿತು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ವಿಜೃಂಭಣೆಯಿಂದ ನಡೆಸಲಾದ ಕರಗ ಮಹೋತ್ಸವದ ಅಂಗವಾಗಿ ನಗರದ ಓ.ಟಿ.ವೃತ್ತ ಹಾಗೂ ಕೋಟೆ ವೃತ್ತಗಳಲ್ಲಿ ಆರ್ಕೆಸ್ಟ್ರಾಗಳನ್ನು ಏರ್ಪಡಿಸಲಾಗಿತ್ತು.
ಕರಗ ಮಹೋತ್ಸವವನ್ನು ನೋಡಲು ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಕರಗ ಹೊತ್ತಿದ್ದ ವಿಜಯಕುಮಾರ್ ನರ್ತನಕ್ಕೆ ಚಪ್ಪಾಳೆ, ಶಿಳ್ಳೆಗಳ ಮುಖಾಂತರ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
ಶ್ರೀ ಪೂಜಮ್ಮ ದೇವಾಲಯದಿಂದ ಹೊರಟ ಕರಗ, ಬೈಪಾಸ್ ರಸ್ತೆಯ ಮುಖಾಂತರ ಓ.ಟಿ. ಸರ್ಕಲ್, ಕೋಟೆ ಸರ್ಕಲ್‍ಗಳಲ್ಲಿ ಆಯೋಜನೆ ಮಾಡಲಾಗಿದ್ದ ಆರ್ಕೆಸ್ಟ್ರಾಗಳಲ್ಲಿ ವಿವಿಧ ಬಗೆಯ ಸಂಗೀತಗಳ ತಾಳಕ್ಕೆ ತಕ್ಕಂತೆ ನೃತ್ಯ ಮಾಡಿದ ನಂತರ ನಗರದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಪೂಜೆಗಳನ್ನು ಸ್ವೀಕರಿಸಿತು.
ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮದೇವಾಲಯದಲ್ಲಿ ರಾತ್ರಿ 10.25 ಕ್ಕೆ ಪ್ರಾರಂಭವಾದ ಕರಗ ಮಹೋತ್ಸವದಲ್ಲಿ ಶಾಸಕ ಎಂ.ರಾಜಣ್ಣ ಸೇರಿದಂತೆ ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ.ಉಪಾಧ್ಯಕ್ಷ ವಿ.ಮುನಿಯಪ್ಪ ಪೂಜೆ ಸಲ್ಲಿಸಿದರು.
ನಗರಸಭೆ ಉಪಾಧ್ಯಕ್ಷೆ ಸುಮಿತ್ರಮ್ಮರಮೇಶ್, ಸದಸ್ಯರಾದ ಚಿಕ್ಕಮುನಿಯಪ್ಪ, ಜೆ.ಎಂ.ಬಾಲಕೃಷ್ಣ, ಲಕ್ಷ್ಮಯ್ಯ, ಮುಖಂಡರಾದ ಚಿಕ್ಕಮುನಿಯಪ್ಪ, ಮುನಿಪೂಜಮ್ಮ, ಎಸ್.ಎಂ. ರಮೇಶ್, ಯಾಮಾ ನಾರಾಯಣಸ್ವಾಮಿ,ನಾಗನರಸಿಂಹ,ನರಸಿಂಹಮೂರ್ತಿ,ಅಜ್ಜಪ್ಪ,ಕೃಷ್ಣಮೂರ್ತಿ,ಮುನಿನರಸಿಂಹ, ಕೆ.ನಾರಾಯಣಸ್ವಾಮಿ, ಕೆ.ಮಂಜುನಾಥ, ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!