25.6 C
Sidlaghatta
Saturday, July 19, 2025

ಶ್ರೀ ವಿರಾಟ್ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

- Advertisement -
- Advertisement -

ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮುದಾಯ ಸಂಘಟಿತರಾಗುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಶ್ರೀ ವಿರಾಟ್ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಮುರಳಿ ಮೋಹನ್ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ಬಳಿ ಇರುವ ಶ್ರೀ ಮುತ್ಯಾಲಮ್ಮ ದೇವಾಲಯದಲ್ಲಿ ಸೋಮವಾರ ಶ್ರೀ ವಿರಾಟ್ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿನ ವಾಸ್ತುಶಿಲ್ಪ ಹಾಗೂ ಕಲೆಯಲ್ಲಿ ವಿಶ್ವಕರ್ಮ ಸಮುದಾಯದ ಪಾತ್ರ ಮಹತ್ತರವಾಗಿದೆ. ತಮ್ಮ ಸುತ್ತಲಿನ ಪರಿಸರದ ಸೊಬಗನ್ನು ಹೆಚ್ಚಿಸುವ ವಿಶ್ವಕರ್ಮ ಸಮುದಾಯದ ಜನರು ವೈಯಕ್ತಿಕವಾಗಿ ತೊಂದರೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ವಿಶ್ವಕರ್ಮ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ಬರುವ ಸಲುವಾಗಿ ತಮ್ಮ ಮಕ್ಕಳನ್ನು ಶಿಕ್ಷಿತರನ್ನಾಗಿಸಲು ಮುಂದಾಗಬೇಕು ಎಂದರು.
ಸಂಘದ ಗೌರವಾಧ್ಯಕ್ಷ ದೇವೆಂದ್ರಚಾರಿ, ಸುಭ್ರಮಣ್ಯಚಾರಿ, ಉಪಾಧ್ಯಕ್ಷ ವೀರಭದ್ರ, ಕಾರ್ಯದರ್ಶಿ ಮುರಳಿಧರ್, ಖಜಾಂಚಿ ಬಸವರಾಜಾಚಾರಿ, ಪ್ರಧಾನ ಕಾರ್ಯದರ್ಶಿ ಸುಬ್ಬಾಚಾರಿ, ಜೆ.ಆರ್.ಚಿಕ್ಕಬಸವರಾಜು, ಗಾಯಿತ್ರಮ್ಮ, ರಮಾದೇವಿ, ಸುಧಾ, ಶ್ರೀದೇವಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!