Home News ಸಂಕ್ರಾಂತಿ ಹಬ್ಬದ ಪ್ರಯುಕ್ತ ರಾಸುಗಳ ಮೆರವಣಿಗೆ

ಸಂಕ್ರಾಂತಿ ಹಬ್ಬದ ಪ್ರಯುಕ್ತ ರಾಸುಗಳ ಮೆರವಣಿಗೆ

0

ಉಲ್ಲೂರುಪೇಟೆಯಶ್ರೀರಾಮ ಭಜನೆ ಮಂದಿರದಲ್ಲಿ ಮಂಗಳವಾರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೇವರಿಗೆ ಅಭಿಷೇಕ ಮಾಡಲಾಯಿತು. ಶ್ರೀರಾಮ, ಮಾರಮ್ಮ ಮತ್ತು ಬಸವಣ್ಣ ದೇವರುಗಳಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.
ಸಂಜೆ ಶ್ರೀಕೃಷ್ಣಸ್ವಾಮಿಯ ತಂಜಾವೂರು ಚಿತ್ರಕಲೆಯ ಚಿತ್ರಪಟವನ್ನು ಪಲ್ಲಕ್ಕಿಯಲ್ಲಿಟ್ಟು ಅಲಂಕರಿಸಿರುವ ಎತ್ತುಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

error: Content is protected !!