27.1 C
Sidlaghatta
Monday, July 14, 2025

ಸಂಘಟನೆಯಲ್ಲಿರುವವರಿಗೆ ಸಾಮಾಜಿಕ ಬದ್ಧತೆಯಿರಬೇಕು

- Advertisement -
- Advertisement -

ಕನ್ನಡಪರ ಸಂಘಟನೆಗಳು ನಾಡು, ನುಡಿ, ಪ್ರಚಲಿತ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನಪರವಾಗಿರಬೇಕು. ಸಂಘಟನೆಯಲ್ಲಿರುವವರಿಗೆ ಸಾಮಾಜಿಕ ಬದ್ಧತೆಯಿರಬೇಕು ಎಂದು ಕರವೇ ಶಿವರಾಮೇಗೌಡರ ಬಣದ ಜಿಲ್ಲಾಧ್ಯಕ್ಷ ಕೆ.ಎ.ಮಂಜುನಾಥ್‌ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರವೇ ಶಿವರಾಮೇಗೌಡರ ಬಣದ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಪರಂಪರೆ ಉಳಿಸಿ ಬೆಳೆಸುವುದು ಆದ್ಯ ಕರ್ತವ್ಯವಾಗಬೇಕು. ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಾಲ್ಲೂಕಿನಲ್ಲಿ ಕನ್ನಡಪರ ಕೆಲಸಗಳನ್ನು ಮಾಡುವ ಮೂಲಕ ಕನ್ನಡಾಭಿಮಾನವನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಕರವೇ ಶಿವರಾಮೇಗೌಡರ ಬಣದ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಕೆ.ಎಸ್‌.ಶ್ರೀಧರ್‌ ಶಿವು, ಉಪಾಧ್ಯಕ್ಷರನ್ನಾಗಿ ಎಂ.ಸಿ.ಚೇತನ್‌, ಸಮರಸೇನೆ ತಾಲ್ಲೂಕು ಅಧ್ಯಕ್ಷ ಅಪ್ಪು, ವಿದ್ಯಾರ್ಥಿ ಘಟಕದ ನಗರಾಧ್ಯಕ್ಷ ರವಿ, ಕಾರ್ಯಾಧ್ಯಕ್ಷ ಮೂರ್ತಿ, ಜಿಲ್ಲಾ ಸಂಚಾಲಕ ಸುರೇಶ್‌ ಅವರನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.
ಕರವೇ ಶಿವರಾಮೇಗೌಡರ ಬಣದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಕುಮಾರ್‌, ಜಿಲ್ಲಾ ಗೌರವಾಧ್ಯಕ್ಷ ಸಿ.ವಿ.ನಾಗರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಸ್‌.ಎಂ.ಸುರೇಶ್‌, ಎಸ್‌.ಕೇಶವಮೂರ್ತಿ, ಮಹೇಶ್‌ ಚತ್ರಪತಿ, ಜಿ.ಕೆ.ಧನುಷ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!