21.2 C
Sidlaghatta
Friday, July 18, 2025

ಸಂತಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮ

- Advertisement -
- Advertisement -

ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸಂತಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸರ್ವಜ್ಞನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗ್ರೇಡ್ ೨ ತಹಸೀಲ್ದಾರ್ ವೈ.ಎಲ್.ಹನುಮಂತರಾವ್ ಮಾತನಾಡಿದರು.
ಸರ್ವಜ್ಞರು ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸರ್ವಜ್ಞರ ತ್ರಿಪದಿಗಳು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿಯನ್ನು ಬೆಳಗಿಸಿವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ರಾಜಸ್ವ ನಿರೀಕ್ಷಕ ವಿಶ್ವನಾಥ್, ದೈಹಿಕ ಶಿಕ್ಷಕ ರಂಗನಾಥ್, ಟಿಪ್ಪು ಸೆಕ್ಯುಲರ್ ಸೇನೆಯ ಮೌಲಾ ಉಪಸ್ಥಿತರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!