25.7 C
Sidlaghatta
Sunday, October 12, 2025

ಸಂಸದ ಕೆ.ಎಚ್‌.ಮುನಿಯಪ್ಪ ಅವರ 69ನೇ ಹುಟ್ಟುಹಬ್ಬ ಆಚರಣೆ

- Advertisement -
- Advertisement -

ಏಳು ಬಾರಿ ಸಂಸದರಾಗುವ ಮೂಲಕ ಜನಾರುರಾಗಿಗಳಾಗಿ ಕೆ.ಎಚ್.ಮುನಿಯಪ್ಪ ಅವರು ಜಿಲ್ಲೆಯ ಜನರ ಸೇವೆಗೆ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಸಾಧನೆ, ಸೇವೆ ಇನ್ನಷ್ಟು ನಡೆಯಲಿ ಎಂದು ಹಾರೈಸುತ್ತಾ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲ ಮುನಿರಾಜು ತಿಳಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಸಂಸದ ಕೆ.ಎಚ್‌.ಮುನಿಯಪ್ಪ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಎನ್‌.ಎಸ್‌.ಯು.ಐ ವತಿಯಿಂದ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್‌ ವಿತರಿಸಿ ಅವರು ಮಾತನಾಡಿದರು.
ದೀನ ದಲಿತರ, ಹಿಂದುಳಿದವರ ಆಶಾಜ್ಯೋತಿಯಾಗಿ ಅವರು ಸಾಮಾಜಿಕ ಜೀವನವನ್ನು ನಡೆಸುತ್ತಿದ್ದಾರೆ. ಅವರ ಸೇವೆ ನಮ್ಮ ಜನರಿಗೆ ಇನ್ನಷ್ಟು ಸಿಗಲಿ. ಅವರ ಅವಧಿಯಲ್ಲಿ ನೀರಿನ ಬವಣೆ ನೀಗುವಂತಾಗಲಿ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗೆ ಸಿಹಿ ವಿತರಿಸಲಾಯಿತು.
ಭಾರತೀಯ ವಿದ್ಯಾರ್ಥಿ ಒಕ್ಕೂಟ(ಎನ್‌.ಎಸ್‌.ಯು.ಐ) ಜಿಲ್ಲಾಧ್ಯಕ್ಷ ವಿಶ್ವನಾಥ್‌, ತಾಲ್ಲೂಕು ಅಧ್ಯಕ್ಷ ದೇವರಾಜ್‌(ದೇವಿ), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀಂದ್ರ, ನಗರ ಘಟಕದ ಅಧ್ಯಕ್ಷ ಅನುಶ್‌, ಗುಡಿಹಳ್ಳಿ ನಾರಾಯಣಸ್ವಾಮಿ, ದಿಬ್ಬೂರಹಳ್ಳಿ ಡಿ.ಬಿ.ನಾಗರಾಜ್‌, ದೇವರಾಜ್‌, ಮಂಜುನಾಥ್‌, ಚರಣ್‌, ವೆಂಕಟೇಶ್‌ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!