ತಾಲ್ಲೂಕಿನ ಸದ್ದಹಳ್ಳಿಯಲ್ಲಿ ಶುಕ್ರವಾರ ಮುನೇಶ್ವರಸ್ವಾಮಿ ದೇವಾಲಯದ ಮೂರನೇ ವರ್ಷದ ವಾರ್ಷಿಕೋತ್ಸವವನ್ನು ಜಾತ್ರೆಯ ರೀತಿಯಲ್ಲಿ ಆಚರಿಸಲಾಯಿತು.
ಕನ್ನಪ್ಪನಹಳ್ಳಿ ಮತ್ತು ಸದ್ದಹಳ್ಳಿ ಗ್ರಾಮಸ್ಥರು ಒಗ್ಗೂಡಿ ಆಚರಣೆಯಲ್ಲಿ ಪಾಲ್ಗೊಂಡರು. ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಗ್ರಾಮದೇವತೆಗಳಾದ ಮುನೇಶ್ವರ, ಆಂಜನೇಯ, ಚೌಡೇಶ್ವರಿ, ಈಶ್ವರ, ಗಂಗಮ್ಮ ದೇವರುಗಳಿಗೆ ಪೂಜೆಯನ್ನು ನೆರವೇರಿಸಿದರು. ತಮಟೆಯ ವಾದನದೊಂದಿಗೆ ಮೆರವಣಿಗೆ ನಡೆಯಿತು.
ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -