ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಮನವಿ

- Advertisement -
- Advertisement -

ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಸದಸ್ಯರು ಸೋಮವಾರ ಬೆಸ್ಕಾಂ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಇಂಧನ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿದಿದೆ. 20 ದಿನಗಳಿಂದ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಕೃಷಿ ಪಂಪ್ಸೆಟ್ಗಳಿಗೆ ಹಾಗೂ ಗ್ರಾಮೀಣ ಪ್ರದೇಶಗಳಿಗೆ 3 ವಾರದಿಂದ 11 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ಪತ್ರಿಕೆಗಳಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಬಗೆಹರಿದಿಲ್ಲ. ರಾತ್ರಿ ವೇಳೆ ವಿದ್ಯುತ್ ಇರುವುದೇ ಇಲ್ಲ. ರೇಷ್ಮೆ ಹುಳು ಸಾಕಾಣಿಕೆ ಮನೆಗಳಿಗೆ ಹಾಗೂ ಬೆಳಗಿನ ಜಾವ ಹಾಲು ಕರೆಯಲು ವಿದ್ಯುತ್ ಇಲ್ಲದಾಗಿದೆ. ಇದರಿಂದಾಗಿ ಮಾನ್ಯ ಸಚಿವರ ಹೇಳಿಕೆಗಳು ಮತ್ತು ವಾಸ್ತವದ ಪರಿಸ್ಥಿತಿ ತದ್ವಿರುದ್ಧವಾಗಿದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ವಿದ್ಯುತ್ ಸಮಸ್ಯೆಯನ್ನು ಬಗೆ ಹರಿಸಿ ಗೊಂದಲವನ್ನು ಸರಿಪಡಿಸುವಂತೆ ಒತ್ತಾಯಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿನಂಜಪ್ಪ, ದ್ಯಾವಪ್ಪ, ಕೇಶವಪ್ಪ, ಮೋಹನ್, ನರಸಿಂಹಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!