Home News ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0

ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ಬೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮೀಣ ಪ್ರದೇಶಗಳಿಗೆ ಅಸಮರ್ಪಕವಾಗಿ ವಿದ್ಯುತ್ ನೀಡಲಾಗುತ್ತಿದೆ. ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ­ಯಾಗುತ್ತಿದೆ. ರೈತರು ಪಂಪ್ಸೆಟ್ ಬಳಸಿ ತೋಟಗಳಿಗೆ ನೀರು ಹಾಯಿಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬೇಸಿಗೆಗೆ ಮೊದಲೇ ವಿದ್ಯುತ್ ಕೊರತೆ ಕಾಣಿಸಿಕೊಂಡಿದೆ. ಬೇಸಿಗೆಯಲ್ಲಿ ರಾಜ್ಯ ಕತ್ತಲೆಯ ಸಾಮ್ರಾಜ್ಯವಾದರೆ ಆಶ್ಚರ್ಯವಿಲ್ಲ. ರಾಜ್ಯ ಸರ್ಕಾರ ಇತ್ತ ಶೀಘ್ರ ಗಮನ ಹರಿಸದಿದ್ದರೆ ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಬೆಸ್ಕಾಂ ಕಚೇರಿ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬೆಸ್ಕಾಂ ಅಧಿಕಾರಿಗಳ ಮನೆ, ಕಚೇರಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬೆಸ್ಕಾಂ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ, ರಮೇಶ್ಬಾಯಿರಿ, ಶ್ರೀರಾಮರೆಡ್ಡಿ, ಶ್ರೀಧರ್, ಸಿ.ವಿ.ಲೊಕೇಶ್ಗೌಡ, ನಂದೀಶ್, ಶಿವಕುಮಾರಗೌಡ, ಮಂಜುಳಮ್ಮ, ಸುಜಾತಮ್ಮ, ರತ್ನಮ್ಮ, ಶಿವಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.