ಸಮಾನತೆಯನ್ನು ನಾವೇ ಪಡೆದುಕೊಳ್ಳಬೇಕು

- Advertisement -
- Advertisement -

ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನತೆಯನ್ನು ಕೊಟ್ಟಿದ್ದು ಅವುಗಳನ್ನು ಪಡೆಯಲು ಮುಂದಾಗಬೇಕಿದೆ ಎಂದು ಸರ್ಕಾರಿ ವಕೀಲೆ ಕುಮುದಿನಿ ತಿಳಿಸಿದರು.
ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಜಗತ್ತಿನಲ್ಲಿ ಮೊದಲಿನಿಂದಲೂ ಮಹಿಳೆಯರ ಮೇಲೆ ದೈಹಿಕ, ಮಾನಸಿಕ ದೌರ್ಜನ್ಯ ನಡೆಯುತ್ತಲೆ ಬಂದಿದೆ. ಈಗಲೂ ಮುಂದುವರೆದಿದೆ. ಮಹಿಳೆಯರ ಮೇಲಿನ ಎಲ್ಲ ರೀತಿಯ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಜತೆಗೆ ಕಾನೂನುಗಳಿಂದಲೆ ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಮಹಿಳೆಯರು ತಮ್ಮಲ್ಲಿನ ಸಾಮರ್ಥ್ಯವನ್ನು ಗುರ್ತಿಸಿಕೊಂಡು ಸ್ವಯಂ ರಕ್ಷಣೆಗೂ ಮುಂದಾಗಬೇಕಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಮಾಕ್ಷಿ ಶಶಿಧರ್ ಮಾತನಾಡಿ, ಸಂವಿಧಾನದಲ್ಲಿ ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಾತಿಯನ್ನು ನೀಡಿದ್ದರೂ ಪ್ರಾಯೋಗಿಕವಾಗಿ ಅದು ಸಮರ್ಪಕವಾಗಿ ಜಾರಿ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಾನಪದ ಕಲಾವಿದ ದೇವರಮಳ್ಳೂರು ಮಹೇಶ್ ಮತ್ತು ತಂಡದವರಿಂದ ಮಹಿಳೆಯ ಸಬಲೀಕರಣ, ಪರಿಸರ ಕುರಿತು ಗಾಯನ ನಡೆಯಿತು.
ವಿವೇಕಾನಂದ ಸೇವಾ ಟ್ರಸ್ಟ್ನ ಅಧ್ಯಕ್ಷ ಮುನೀಂದ್ರ, ನಗರಸಭೆಯ ಸಮುದಾಯ ಸಂಘಟಕರಾದ ಸುಧಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ಅನಸೂಯಮ್ಮ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!