16.1 C
Sidlaghatta
Friday, February 13, 2026

ಸರ್ಕಾರಿ ಆಸ್ಪತ್ರೆಗಳಿಗೆ ಉಚಿತ ಆಂಬುಲೆನ್ಸ್ಗಳ ಹಸ್ತಾಂತರ ಕಾರ್ಯಕ್ರಮ

- Advertisement -
- Advertisement -

ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಬರುವವರು ಬಡವರು, ಬಡವರಿಗೆ ಪ್ರಥಮ ಆದ್ಯತೆ ನೀಡಿ, ಅವರನ್ನು ಪ್ರೀತಿಯಿಂದ ಕಾಣಿ, ಸರ್ಕಾರಿ ಆಸ್ಪತ್ರೆಯು ಜನರು ಬೆವರು ಸುರಿಸಿ ಕಟ್ಟಿದ ತೆರಿಗೆ ಹಣದಿಂದ ನಿರ್ಮಾಣವಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದರು.ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಬರುವವರು ಬಡವರು, ಬಡವರಿಗೆ ಪ್ರಥಮ ಆದ್ಯತೆ ನೀಡಿ, ಅವರನ್ನು ಪ್ರೀತಿಯಿಂದ ಕಾಣಿ, ಸರ್ಕಾರಿ ಆಸ್ಪತ್ರೆಯು ಜನರು ಬೆವರು ಸುರಿಸಿ ಕಟ್ಟಿದ ತೆರಿಗೆ ಹಣದಿಂದ ನಿರ್ಮಾಣವಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಎಚ್.ಡಿ.ದೇವೆಗೌಡ ಮತ್ತು ಜೈ ಪ್ರಕಾಶ್ ನಾರಾಯಣ್ ಸೇವಾಬಿವೃದ್ದಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತ ಆಂಬುಲೆನ್ಸ್ಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಟ್ರಸ್ಟ್ ಎಂದರೆ ನಂಬಿಕೆ. ಟ್ರಸ್ಟ್ ವತಿಯಿಂದ ಯಾರೇ ಆಗಲಿ ಬಡವರಿಗೆ ಉಪಯೋಗವಾಗುವ ಕೆಲಸ ಮಾಡಿದ್ದರೆ ಅವರಿಗೆ ಬೆಂಬಲ ನೀಡುತ್ತೇನೆ. ಆಂಬುಲೆನ್ಸ್ಗಳ ಮೇಲೆ ಟ್ರಸ್ಟ್ನ ಹೆಸರನ್ನು ಬಿಟ್ಟು ಭಾವಚಿತ್ರಗಳನ್ನು ತೆಗೆದುಹಾಕಲಾಗುವುದು. ತಾಲ್ಲೂಕಿನಲ್ಲಿ ಪ್ರತಿ ೧೦- ರಿಂದ ೧೫ ಕಿ.ಮೀ ಅಂತರದಲ್ಲಿ ರೋಗಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಒಂದು ಆಂಬುಲೆನ್ಸ್ ನೀಡುವ ಯೋಜನೆ ಮಾಡಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಅನುಷ್ಟಾನಗೊಳಿಸಲು ಕ್ರಮ ತೆಗೆದುಕೊಂಡಿದೆ. ಆಂಬುಲೆನ್ಸ್ ಸಾರ್ವಜನಿಕರ ಪ್ರಾಣ ಕಾಪಾಡುವ ತುರ್ತುವಾಹನವಾಗಿರುವುದರಿಂದ ಆಂಬುಲೆನ್ಸ್ ಓಡಾಡುವಾಗ ದಾರಿ ಬಿಟ್ಟು ಸಹಕರಿಸಿ ಎಂದು ಮನವಿ ಮಾಡಿದರು.
ಇಡೀ ಕರ್ನಾಟಕದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಡಿ.ಗ್ರೂಪ್ ನೌಕರರ ಕೊರತೆ ಇದ್ದು, ಗುತ್ತಿಗೆ ಆಧಾರದ ಮೇಲೆ ನೌಕರರನ್ನು ತೆಗೆದುಕೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಕೊರತೆ ಇರುವ ಸಿಬ್ಬಂದಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ವಿಶೇಷ ನೇಮಕಾತಿ ಪ್ರಕ್ರಿಯೆ ಪ್ರಾರಂಭಮಾಡಿದ್ದು, ತ್ವರಿತವಾಗಿ ೨-೩ ತಿಂಗಳ ಅವಧಿಯಲ್ಲಿ ಎಲ್ಲ ರೀತಿಯ ಸಿಬ್ಬಂದಿಯ ಕೊರತೆ ನೀಗಿಸಲಾಗುವುದೆಂದು ಭರವಸೆ ನೀಡಿದರು.
ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡಲು ಅಗತ್ಯವಾದ ಕಾಮಗಾರಿ ಜಾರಿಯಲ್ಲಿದ್ದು ಕಾಮಗಾರಿ ಶೇ ೮೦ ಭಾಗ ಕಾಮಗಾರಿ ಮುಗಿದಿದೆ. ಯೋಜನೆಗೆ ೨೦೦೦ ಹೆಕ್ಟೆರ್ ಭೂಮಿಯ ಅಗತ್ಯವಿದ್ದು, ಸುಮಾರು ೭ ಹಳ್ಳಿಗಳು ಜಲಾವೃತ್ತವಾಗಲಿದೆ. ೭ ಗ್ರಾಮದ ಜನರಿಗೆ ಬೇರೆ ಕಡೆ ಸ್ಥಳಾಂತರಿಸಿ, ಅವರಿಗೆ ಅಗತ್ಯವಿರುವ ಭೂಮಿ, ಮತ್ತಿತರರ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಗೆ ೮ ಅಣೆಕಟ್ಟುಗಳನ್ನು ಕಟ್ಟಿ ಶೇಖರಣೆಯಾದ ನೀರನ್ನು ಪಂಪ್ ಮೂಲಕ ಕೆರೆಗಳಿಗೆ ನೀಡಲಾಗುವುದು, ಅದಕ್ಕೂ ಮೊದಲು ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಇದೇ ವರ್ಷದ ನವೆಂಬರ್ ಒಳಗೆ ಕೋಲಾರದ ಕೆರೆಗಳಿಗೆ ಹಾಯಿಸಲಾಗುವುದು. ಇದಕ್ಕೆ ಆಯಾ ತಾಲ್ಲೂಕಿನ ಜನ ಪ್ರತಿನಿಧಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋದಾಗ ಅನಗತ್ಯವಾದ ಪರೀಕ್ಷೆಗಳನ್ನು ಮಾಡಿ ಹಣ ದೋಚುತ್ತಿದ್ದು, ಆಪರೇಷನ್ಗಳಿಗೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ದ ನಿಯಂತ್ರಣ ಸಾಧಿಸುವ ನಿಟ್ಟಿನಲ್ಲಿ ಕಾನೂನಿನಲ್ಲಿ ತಿದ್ದುಪಡಿ ಮಾಡಿದೆ. ಅಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಖಾಸಗಿ ಆಸ್ಪತ್ರೆಗಳ ಮೇಲೆ ಪ್ರಕರಣ ದಾಖಲು ಮಾಡಬಹುದಾಗಿದ್ದು, ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಡಯಾಲಿಸಿಸ್ ನಿಂದ ಹಿಡಿದು ಎಲ್ಲ ಆಧುನಿಕರ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗುವುದು, ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಚೆ ಔಷದಿಗಳಿಗೆ ಚೀಟಿ ಬರೆದುಕೊಡಬಾರದು ಎಂದು ಆದೇಶ ನೀಡಲಾಗುವುದು. ಔಷಧಿ ಕಂಪೆನಿಗಳು ಹೆಚ್ಚಿನ ಲಾಭ ಪಡೆದು ತಮ್ಮ ತಮ್ಮ ಔಷದಿಗಳನ್ನು ಮಾರಾಟ ಮಾಡುತ್ತಿದ್ದು, ಅದನ್ನು ತಡೆಗಟ್ಟುವ ಸಲುವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಕ್ ಔಷದಿ ಕೇಂದ್ರಗಳನ್ನು ತೆರೆಯುತ್ತಿದ್ದು, ಕಡಿಮೆ ದರದಲ್ಲಿ ಔಷದಿಗಳನ್ನು ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಚ್.ಡಿ.ದೇವೆಗೌಡ ಮತ್ತು ಜೈ ಪ್ರಕಾಶ್ ನಾರಾಯಣ್ ಸೇವಾಬಿವೃದ್ದಿ ಚಾರಿಟಬಲ್ ಟ್ರಸ್ಟ್ ವತಿಯಿಂದ ೩ ಆಂಬುಲೆನ್ಸ್ಗಳನ್ನು ಹಸ್ತಾಂತರ ಮಾಡಲಾಯಿತು.
ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸರ್ಕಾರಿ ಆಸ್ಪತ್ರೆಯಲ್ಲಿರವ ರೋಗಿಗಳನ್ನು ಮಾತನಾಡಿಸಿ ಅವರ ಕುಂದು ಕೊರತೆಗಳನ್ನು ವಿಚಾರಿಸಿದರು.
ಎಚ್.ಡಿ.ದೇವೆಗೌಡ ಮತ್ತು ಜೈ ಪ್ರಕಾಶ್ ನಾರಾಯಣ್ ಸೇವಾಬಿವೃದ್ದಿ ಚಾರಿಟಬಲ್ ಟ್ರಸ್ಟ್ನ ಅದ್ಯಕ್ಷ ಮೇಲೂರು ರವಿ, ಜಿಲ್ಲಾ ಪಂಚಾಯ್ತಿ ಉಪಾದ್ಯಕ್ಷೆ ತನುಜಾ ರಘು, ಜಿಲ್ಲಾ ಪಂಚಾಯ್ತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯ್ತಿ ಅದ್ಯಕ್ಷ ಲಕ್ಷೀನಾರಾಯಣರೆಡ್ಡಿ, ಉಪಾದ್ಯಕ್ಷ ನರಸಿಂಹಯ್ಯ, ಡಿ.ಹೆಚ್.ಓ ಡಾ.ರವಿಶಂಕರ್, ವೈದ್ಯಾದಿಕಾರಿಗಳು, ನಗರಸಭಾ ಸದಸ್ಯರು, ಸಾರ್ವಜನಿಕರು ಕಾರ್ಯಕ್ರದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!