24.1 C
Sidlaghatta
Tuesday, February 10, 2026

ಸರ್ಕಾರಿ ಕಚೇರಿಗಳಲ್ಲಿ ಮದ್ಯವರ್ತಿಗಳ ಹಾವಳಿ: ಹೋರಾಟದ ಎಚ್ಚರಿಕೆ

- Advertisement -
- Advertisement -

ತಾಲ್ಲೂಕು ಕಚೇರಿ, ಕಂದಾಯ, ಭೂಮಾಪನ, ಉಪನೋಂಧಣಾಕಾರಿ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಲ್ಲಿ ಮದ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ತಾಲ್ಲೂಕು ಅಧ್ಯಕ್ಷ ಎನ್.ವಿಜಯ್ ಆರೋಪಿಸಿದರು.
ಜಾಗೃತಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ಯವರ್ತಿಗಳ ಹಾವಳಿಯಿಂದ ಸರ್ಕಾರದ ಅನೇಕ ಯೋಜನೆಗಳು ಅನರ್ಹರ ಪಾಲಾಗುತ್ತಿದೆ. ಅಭಿವೃದ್ದಿಯೂ ಕುಂಠಿತಗೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದರು.
ಕಳೆದ ನಾಲ್ಕು ವರ್ಷಗಳ ಹಿಂದೆ ನಗರದ ಎಸ್.ವಿ.ಎಂಟರ್‌ಪ್ರೈಸಸ್‌ನಲ್ಲಿ ನಡೆದ ನಕಲಿ ಇ-ಸ್ಟಾಂಪ್‌ಗಳ ಅವ್ಯವಹಾರದ ಪ್ರಕರಣಕ್ಕೆ ಸಂಬಂಸಿದಂತೆ ತನಿಖೆ ನಡೆಸಿದ ನಗರಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣವನ್ನು ಕೈ ಬಿಟ್ಟಿದ್ದಾರೆ.
ನಕಲಿ ಇ-ಸ್ಟಾಂಪ್ ತಯಾರಿಸಿದ ಆರೋಪಿಗಳೊಂದಿಗೆ ಪೊಲೀಸರು, ಉಪ ನೋಂಧಣಾಕಾರಿ ಕಚೇರಿಯ ಅಧಿಕಾರಿಗಳು ಶಾಮೀಲಾಗಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.
ಈ ಬಗ್ಗೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಲಾಗುವುದು ಎಂದರು.
ಸರ್ಕಾರಿ ಕಚೇರಿ, ಇಲಾಖೆಗಳಲ್ಲಿ ಅವ್ಯವಹಾರ, ಮದ್ಯವರ್ತಿಗಳ ಹಾವಳಿ, ಅನರ್ಹರಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ನಮ್ಮ ಸಮಿತಿಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಮ್ಮ ಸಮಿತಿಯಿಂದ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ಜಾಗೃತಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುರೇಶ್, ಉಪಾಧ್ಯಕ್ಷ ಸವಿತಾ ಚಂದ್ರು, ಯುವ ಘಟಕದ ಅಧ್ಯಕ್ಷ ಪ್ರತಾಪ್, ಕಾರ್ಮಿಕ ಘಟಕದ ಅಧ್ಯಕ್ಷ ದೀಪು, ನಗರ ಘಟಕದ ಅಧ್ಯಕ್ಷ ರಂಜಿತ್, ಚಂದ್ರು, ವೇಣು, ಗಂಗಾಧರ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!