ಏಳನೇ ವೇತನ ಆಯೋಗ ರಚನೆ ಹಾಗೂ ಕೇಂದ್ರ ರಾಜ್ಯ ಸರ್ಕಾರಿ ನೌಕರರ ನಡುವಿನ ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಫೆಬ್ರುವರಿ 26 ರ ಶುಕ್ರವಾರದಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ತಹಶೀಲ್ದಾರ್ ಕಚೇರಿಯ ಮುಂದೆ ಮಧ್ಯಾಹ್ನ 1.30 ರಿಂದ 2.30 ರವರೆಗೆ ಪ್ರತಿಭಟನೆ ನಡೆಸಲಾಗುವುದೆಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಗುರುರಾಜರಾವ್ ಹಾಗೂ ಕಾರ್ಯದರ್ಶಿ ಅಕ್ಕಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -







