27.9 C
Sidlaghatta
Saturday, August 2, 2025

ಸರ್ಕಾರಿ ಶಾಲೆಗಳಿಗೆ ಸಮುದಾಯ ಸ್ಪಂದಿಸಬೇಕು

- Advertisement -
- Advertisement -

ಸರ್ಕಾರಿ ಶಾಲೆಗಳಿಗೆ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಸ್ಪಂದಿಸಬೇಕು. ಶಾಲೆಗಳಲ್ಲಿ ಅಗತ್ಯವಾದ ನೆರವುಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು ಎಂದು ನಿವೃತ್ತ ಶಿಕ್ಷಣ ಸಂಯೋಜಕರಾದ ಆರ್. ಕೃಷ್ಣಪ್ಪ ತಿಳಿಸಿದರು.
ತಾಲ್ಲೂಕಿನ ಹಾರಡಿ ಸರ್ಕಾರಿ ಕಿರಿಯ ಪ್ರಾಥಮಮಿಕ ಶಾಲೆಯಲ್ಲಿ ಶನಿವಾರ ನಡೆದ ೬೯ ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಶಾಲೆಗೆ ವಾಟರ್ ಫಿಲ್ಟರ್, ಬ್ಯಾಂಡ್ ಸೆಟ್ ಹಾಗೂ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿವೃತ್ತ ಶಿಕ್ಷಕರಾದ ನಾರಾಯಣಾಚಾರಿ , ಸಾಹಿತಿಗಳಾದ ಅಕ್ಕಿಮಂಗಲ ಮಂಜುನಾಥ್ ಹಾಗೂ ನಿವೃತ್ತ ಶಿಕ್ಷಣ ಸಂಯೋಜಕ ಆರ್. ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಬಹುಮಾನಗಳಾಗಿ ಪುಸ್ತಕಗಳನ್ನು ಹಾಗೂ ಕೊಡುಗೆ ನೀಡಿದ ಗ್ರಾಮಸ್ಥರಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.
ಕುಂಬಿಗಾನಹಳ್ಳಿ ಗ್ರಾಮಪಂಚಾಯತಿ ಉಪಾಧ್ಯಕ್ಷೆ ಭಾಗ್ಯಮ್ಮ ನಾರಾಯಣಸ್ವಾಮಿ ಧ್ವಜಾರೋಹಣ ಮಾಡಿದರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ. ವೆಂಕಟೇಶಪ್ಪ, ಎಚ್.ಎಂ. ಭೈರೇಗೌಡ, ಸಿಆರ್ಪಿ ಶ್ರೀರಾಮುಲು, ಎಸ್.ಡಿ.ಎಂ.ಸಿ. ಅಧ್ಯಕ್ಷ ಚನ್ನಕೃಷ್ಣಪ್ಪ, ಶಿಕ್ಷಕರಾದ ಬಿ.ಎನ್. ಬಸವರಾಜ್, ಎನ್. ಹೇಮಾವತಿ, ನಾಗರತ್ನಮ್ಮ ಹಾಗೂ ಚಂದ್ರಕಲಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!