Home News ಸರ್ಕಾರಿ ಶಾಲೆ ಗಟ್ಟಿಗೊಳಿಸೋಣ

ಸರ್ಕಾರಿ ಶಾಲೆ ಗಟ್ಟಿಗೊಳಿಸೋಣ

0

ಕನ್ನಡದ ಹೋರಾಟಗಾರರು ಹಾಗೂ ಕನ್ನಡ ಭಾಷೆಯ ಬೆಳವಣಿಗೆಗಾಗಿ ಹೋರಾಡುವ ವಿವಿಧ ಸಂಘಸಂಸ್ಥೆಗಳು ಸರ್ಕಾರಿ ಶಾಲೆಗಳ ಉಳಿವಿಗಾಗಿ ಶ್ರಮಿಸಬೇಕು ಎಂದು ವಚನ ಸಾಹಿತ್ಯ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ದೇವರಾಜ್ ತಿಳಿಸಿದರು.
ತಾಲ್ಲೂಕಿನ ತಾತಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಗ್ರಾಮದ ಜೈ ಭಾರತ್ ಯುವಕರ ಸಂಘದ ಸಹಯೋಗದಲ್ಲಿ ಶಾಲೆಯಲ್ಲಿ ನಡೆದ ‘ಚಿಣ್ಣರ ಸಂಭ್ರಮ 2018’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದಂತೆ ಅಭಿವೃದ್ಧಿಪಡಿಸಬಹುದು. ಅದಕ್ಕೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವಿದೆ. ಕನ್ನಡದ ಕಾರ್ಯಕ್ರಮಗಳೆಂದರೆ ಕೇವಲ ಉತ್ಸವ ಮೆರವಣಿಗೆಗಳಲ್ಲ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಗಟ್ಟಿಗೊಳಿಸುವುದೂ ಸಹ ಕನ್ನಡದ ಕೆಲಸವಾಗಿದೆ. ಗ್ರಾಮದ ಯುವಕರು ಒಗ್ಗೂಡಿ ಶಾಲೆಯಲ್ಲಿ ಕಾರ್ಯಕ್ರಮಗಳು ನಡೆಯಲು, ಶಾಲೆಯು ಅಭಿವೃದ್ಧಿ ಹೊಂದಲು ಪಣ ತೊಟ್ಟಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳು ವಿವಿಧ ನೃತ್ಯಗಳು, ಸಕ್ಕೂಬಾಯಿ ಮತ್ತು ಹುಚ್ಚಾಸ್ಪತ್ರೆ ಎಂಬ ನಾಟಕಗಳನ್ನು ಪ್ರದರ್ಶಿಸಿ ಪೋಷಕರು ಮತ್ತು ಪ್ರೇಕ್ಷಕರ ಮನಗೆದ್ದರು.
ಈ ಸಂದರ್ಭದಲ್ಲಿ ವಚನ ಸಾಹಿತ್ಯ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ದೇವರಾಜ್, ಕನ್ನಮಂಗಲ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜೆ.ಶ್ರೀನಿವಾಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಸಿ.ಕೃಷ್ಣಪ್ಪ, ಸಿಆರ್ಪಿ ನರಸಿಂಹರಾಜು ಅವರನ್ನು ಸನ್ಮಾನಿಸಲಾಯಿತು.
ಜೈ ಭಾರತ್ ಯುವಕರ ಸಂಘದ ಪದಾಧಿಕಾರಿಗಳು, ಮುಖ್ಯ ಶಿಕ್ಷಕಿ ಸರಸ್ವತಮ್ಮ, ಶಿಕ್ಷಕರಾದ ಎಂ.ದೇವರಾಜ್, ಡಿ.ಎಸ್.ಶ್ರೀಕಾಂತ್, ಎಚ್.ಆರ್.ಮಂಜುನಾಥ್, ಟಿ.ತ್ರಿವೇಣಿ, ಕೆ.ಎ.ನಾಗರಾಜ್, ಶ್ರೀನಿವಾಸ್ ಯಾದವ್ ಹಾಜರಿದ್ದರು.