Home News ಸವಿತಾ ಸಮಾಜದಿಂದ ವಿಶೇಷ ಪೂಜಾ ಕಾರ್ಯಕ್ರಮ

ಸವಿತಾ ಸಮಾಜದಿಂದ ವಿಶೇಷ ಪೂಜಾ ಕಾರ್ಯಕ್ರಮ

0

ತಾಲ್ಲೂಕು ಸವಿತಾ ಸಮಾಜ ಹಾಗೂ ತಾಲ್ಲೂಕು ಸವಿತಾ ಕಲಾವಿದರ ಸಂಘದ ವತಿಯಿಂದ ಮೂರನೇ ಶ್ರಾವಣ ಶನಿವಾರದ ಪ್ರಯುಕ್ತ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ದೇವಾಲಯದಲ್ಲಿ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆದಿದ್ದು ಸವಿತಾ ಸಮಾಜದ ಎಲ್ಲಾ ಮುಖಂಡರು ಯುವಕರು ಹಾಗೂ ನಗರದ ನಾಗರಿಕರು ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಸಕ ವಿ.ಮುನಿಯಪ್ಪ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕಿಯಲ್ಲಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಮೆರವಣಿಗೆ ಮಾಡಲಾಯಿತು.

error: Content is protected !!