27.1 C
Sidlaghatta
Saturday, April 20, 2024

ಸಹಾಯಧನದ ಚೆಕ್ ವಿತರಣೆ

- Advertisement -
- Advertisement -

ಕುರಿ, ವಾಹನ, ರೇಷ್ಮೆ ಉದ್ದಿಮೆ ಮುಂತಾದವುಗಳಿಗೆ ಬಳಸಿಕೊಳ್ಳಲು ಸಹಾಯಧನದ ಚೆಕ್ಕನ್ನು ಶಾಸಕ ಎಂ.ರಾಜಣ್ಣ ಬುಧವಾರ ಫಲಾನುಭವಿಗಳಿಗೆ ವಿತರಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಉದ್ಯೋಗ ಮತ್ತು ಐಎಸ್ಬಿ ಯೋಜನೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಒಂಬತ್ತು ಮಂದಿ ಫಲಾನುಭವಿಗಳಿಗೆ ಒಟ್ಟು ನಾಲ್ಕು ಲಕ್ಷ ಎಂಬತ್ತು ಸಾವಿರ ರೂಪಾಯಿಗಳ ಚೆಕ್ಕನ್ನು ವಿತರಿಸಿದರು.
ಎಂಟು ಮಂದಿ ಫಲಾನುಭವಿಗಳಿಗೆ ಕುರಿ ಸಾಕಾಣಿಕೆ ಮತ್ತು ರೇಷ್ಮೆ ತಯಾರಿಕೆಗಾಗಿ ತಲಾ 35 ಸಾವಿರ ರೂಪಾಯಿಗಳ ಚೆಕ್ಕನ್ನು ನೀಡಿದರೆ, ಟಾಟಾ ಏಸ್ ವಾಹನ ಖರೀದಿಗೆ ಒಬ್ಬ ಫಲಾನುಭವಿಗೆ 2 ಲಕ್ಷ ರೂಪಾಯಿಗಳ ಚೆಕ್ ನೀಡಲಾಯಿತು.
‘ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ, ಮತ್ತಷ್ಟು ಹೆಚ್ಚಿನ ಸಾಲವನ್ನು ಪಡೆಯಬಹುದು. ಯಾವುದೇ ಯೋಜನೆಯು ಯಶಸ್ವಿಯಾಗಲು ಸಾಲದ ಮರುಪಾವತಿ ಅತ್ಯಗತ್ಯ. ಸ್ತ್ರೀ ಶಕ್ತಿ ಸಂಘಗಳಿಗೂ ಈ ಸಾಲದ ಸೌಲಭ್ಯವಿದ್ದು, ಸದ್ಭಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಎಂ.ರಾಜಣ್ಣ ಈ ಸಂದರ್ಭದಲ್ಲಿ ತಿಳಿಸಿದರು.
ಶಾಸಕ ಎಂ.ರಾಜಣ್ಣ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಪ್ರಭಾಕರ್, ದ್ಯಾವಪ್ಪ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಸುರೇಶ್, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮರಿಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!