ಸಾದಲಿಯಲ್ಲಿ ಪಿಂಚಣಿ ಅದಾಲತ್

- Advertisement -
- Advertisement -

ಪಿಂಚಣಿ ಪಡೆಯುವ ಪ್ರತಿಯೊಬ್ಬರೂ ಖಾತೆಯನ್ನು ಹೊಂದಿರಬೇಕು. ಮುಂದಿನ ದಿನಗಳಲ್ಲಿ ಪೋಸ್ಟ್ ಮ್ಯಾನ್ ಮುಖಾಂತರ ಪಿಂಚಣಿ ಬರುವುದಿಲ್ಲ. ನೇರವಾಗಿ ತಮ್ಮ ಖಾತೆಗೆ ವರ್ಗಾವಣೆಯಾಗುತ್ತದೆ ಎಂದು ತಹಶೀಲ್ದಾರ್ ಮನೋರಮಾ ತಿಳಿಸಿದರು.
ತಾಲ್ಲೂಕಿನ ಸಾದಲಿ ಗ್ರಾಮದ ನಾಡಕಚೇರಿಯಲ್ಲಿ ಬುಧವಾರ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಮಾರು 40 ಅರ್ಜಿಗಳನ್ನು ವಿಲೇವಾರಿ ಮಾಡಿ ನಂತರ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಪಿಂಚಣಿ ಪಡೆಯಲು ದಾಖಲೆಗಳನ್ನು ಒಟ್ಟುಗೂಡಿಸುವಲ್ಲಿ ವಿಫಲರಾಗಿರುತ್ತಾರೆ. ಅವರಿಗೆ ಅನುಕೂಲವಾಗುವ ಹಾಗೆ ಅವರಿಗೆ ಅಗತ್ಯ ಮಾಹಿತಿಗಳನ್ನು ನೀಡಿ ದಾಖಲೆ ನೀಡಲು ಸಹಕರಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ದಾಖಲೆಗಳನ್ನು ಒದಗಿಸಲು ವಿಫಲರಾದವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಉಪತಹಶೀಲ್ದಾರ್ ಲಕ್ಷ್ಮೀನಾರಾಯಣ್, ಜೈಪ್ರಕಾಶ್, ರೈತಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ನಾರಾಯಣದಾಸರಹಳ್ಳಿ ಟಿ.ಕೃಷ್ಣಪ್ಪ, ದೊಡ್ಡದಾಸರಹಳ್ಳಿ ಜಿ.ಕೃಷ್ಣಪ್ಪ, ಆನಂದ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಲಕ್ಷ್ಮೀ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!