ಸಾಮೂಹಿಕ ರಾಸು ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ಚೆಕ್ ವಿತರಣೆ

- Advertisement -
- Advertisement -

ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ರೈತರು ಖಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಲು ಮುಂದಾಗಬೇಕು ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.
ನಗರದ ಕೋಚಿಮುಲ್ ಶಿಬಿರ ಘಟಕದ ಕಛೇರಿಯಲ್ಲಿ ಸಾಮೂಹಿಕ ರಾಸು ವಿಮೆ ಯೋಜನೆಯಡಿ ಮೃತಪಟ್ಟಿರುವ ರಾಸುಗಳ ರೈತರಿಗೆ ಪರಿಹಾರದ ಚೆಕ್ಕುಗಳನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು.
ತಾಲ್ಲೂಕಿನಾದ್ಯಂತ ಸುಮಾರು ೨೨೦ ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು ಎಲ್ಲಾ ಸಂಘಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿವೆ. ಹಾಲು ಉತ್ಪಾದನೆ ಹಾಗೂ ಗುಣಮಟ್ಟದಲ್ಲಿ ಶಿಡ್ಲಘಟ್ಟ ತಾಲ್ಲೂಕು ಜಿಲ್ಲೆಯಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ಈ ಭಾಗದ ರೈತರು ತಮ್ಮ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಕೋಚಿಮುಲ್ ಒಕ್ಕೂಟದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಮತ್ತಷ್ಟು ಮುಂದುವರೆಯಬೇಕು ಎಂದರು.
ತಾಲ್ಲೂಕಿನಾದ್ಯಂತ ಇತ್ತೀಚೆಗೆ ಮೃತಪಟ್ಟ ರಾಸುಗಳ ೧೮ ಮಂದಿ ಫಲಾನುಭವಿಗಳಿಗೆ ತಲಾ ೬೦ ಸಾವಿರದಂತೆ ಸುಮಾರು ೧ ಕೋಟಿ ಮೊತ್ತದ ವಿಮೆ ಚೆಕ್ ವಿತರಿಸಲಾಯಿತು. ರಾಸು ವಿಮೆ ಪಡೆದ ಫಲಾನುಭವಿಗಳು ಹಣವನ್ನು ವ್ಯರ್ಥಮಾಡದೆ ಉತ್ತಮ ರಾಸುಗಳನ್ನು ಖರೀದಿ ಮಾಡಿ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಬಿರ ಘಟಕದ ಉಪ ವ್ಯವಸ್ಥಾಪಕ ಡಾ.ಬಿ.ವಿ.ಚಂದ್ರಶೇಖರ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರೇಗೌಡ, ವಿಸ್ತರಣಾಧಿಕಾರಿ ಶಂಕರ್ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!