ನಗರದ ಡಾಲ್ಫಿನ್ ಶಾಲೆಯ ಆವರಣದಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಕ್ಕೆ ಸೇರಿ ಸದಸ್ಯರಲ್ಲಿ ಶಿಸ್ತು, ವ್ಯವಹಾರ ಜ್ಞಾನ, ಸಂಘಟನಾ ಶಕ್ತಿ, ವೈಯಕ್ತಿಕ ಜೀವನದಲ್ಲಿ ಬದಲಾವಣೆಯಾಗಿ ಕುಟುಂಬಗಳು ಸರ್ವತೋಮುಖ ಅಭಿವೃದ್ಧಿಯತ್ತ ಸಾಗಿವೆ. ಇದು ಸಾಮಾಜಿಕ ಚಳುವಳಿಯಂತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬದಲಾಗುತ್ತಿರುವ ಇಂದಿನ ಸಮಾಜದಲ್ಲಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವಂತಹ ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ಹೊಸ ಬದಲಾವಣೆಯಾಗುತ್ತದೆ ಮತ್ತು ಊರಿಗೆ ಶ್ರೇಯಸ್ಸಾಗುತ್ತದೆ. ಎಲ್ಲರೂ ಹೊಂದಾಣಿಕೆಯಿಂದ ಬಾಳುವಂತೆ ಪ್ರೇರೇಪಣೆ ನೀಡಿದಂತಾಗಿರುತ್ತದೆ. ಒಗ್ಗಟ್ಟಿಗೆ, ಯಶಸ್ಸಿಗೆ, ಸಮಾನತೆಗೆ ಈ ಕಾರ್ಯಕ್ರಮ ಸಹಕಾರಿ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಒಂದೇ ವೇದಿಕೆಯಲ್ಲಿ ಮೂಡಿ ಬಂದಿದೆ. ಈ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರಿರುವುದಕ್ಕೆ ಸಂಘಟನಾಶಕ್ತಿ, ಹೊಂದಾಣಿಕೆ ಮುಖ್ಯ ಎಂದು ಹೇಳಿದರು.
ಶ್ರೀ ಸಾಮೂಹಿಕ ಸತ್ಯ ನಾರಾಯಣ ಪೂಜೆ ಪ್ರಾರಂಭಗೊಂಡು ಈ ಪೂಜಾ ಕಾಯಕ್ರಮವನ್ನು ಒಕ್ಕೂಟದ ಅಧ್ಯಕ್ಷರುಗಳು, ಮೇಲ್ವಿಚಾರಕರು, ಆಡಳಿತ ಮಂಡಳಿಯ ಕಾರ್ಯಧ್ಯಕ್ಷರು , ಸೇವಾ ಪ್ರತಿನಿಧಿಗಳು ಮತ್ತು ಗಣ್ಯರ ಸಂಕಲ್ಪದೊಂದಿಗೆ ಪ್ರಾರಂಭಿಸಲಾಯಿತು. ಸುಮಾರು 65 ದಂಪತಿಗಳು ವ್ರತಾಧಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಳ್ಳೂರು ಚೌಡೇಶ್ವರಿ ದೇವಸ್ಥಾನಕ್ಕೆ ಒಂದು ಲಕ್ಷ ರೂ, ಹೇಮಾರ್ಲಹಳ್ಳಿ ಪಟಾಲಮ್ಮನ ದೇವಸ್ಥಾನಕ್ಕೆ ಒಂದೂವರೆ ಲಕ್ಷರೂ ಹಾಗೂ ಕೃಷಿ ಅನುದಾನದ ಅಡಿಯಲ್ಲಿ 24 ಮಂದಿ ರೈತ ಫಲಾನುಭವಿಗಳಿಗೆ ತಲಾ ಮೂರು ಸಾವಿರ ರೂಗಳ ಪ್ರೋತ್ಸಾಹಧನವನ್ನು ವಿತರಿಸಲಾಯಿತು.
ಡಾಲ್ಫಿನ್ ಸಂಸ್ಥೆಯ ಅಧ್ಯಕ್ಷ ಎ.ನಾಗರಾಜು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ವಸಂತ್, ಯೋಜನಾಧಿಕಾರಿ ಮೋಹನ್, ಜನಜಾಗೃತಿ ವೇದಿಕೆಯ ಸದಸ್ಯರಾದ ಬೋದಗೂರು ವೆಂಕಟಸ್ವಾಮಿರೆಡ್ಡಿ, ನಾಗೇಂದ್ರ, ಎ.ಎಂ.ತ್ಯಾಗರಾಜು, ಮೇಲ್ವಿಚಾರಕರಾದ ಜನಾರ್ಧನ, ಬಿ.ಜ್ಯೋತಿ, ನಗರಸಭೆ ಸದಸ್ಯ ಚಿಕ್ಕಮುನಿಯಪ್ಪ ಹಾಜರಿದ್ದರು.
- Advertisement -
- Advertisement -
- Advertisement -