ಸಾಯಿನಾಥ ಜ್ಞಾನಮಂದಿರದಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಮಳ್ಳೂರು ಗ್ರಾಮದ ಹೊರವಲಯದ ಸಾಯಿನಾಥ ಜ್ಞಾನಮಂದಿರದಲ್ಲಿ ಶನಿವಾರ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಗುರುಪೂರ್ಣಿಮಾ ಪ್ರಯುಕ್ತ ಮೂರು ದಿನಗಳಿಂದ ರಾಮಕೋಟಿ ಅಖಂಡ ಭಜನೆಯನ್ನು ಏರ್ಪಡಿಸಲಾಗಿತ್ತು. ಮಳ್ಳೂರು, ಸೊಣ್ಣೇನಹಳ್ಳಿ, ಅಪ್ಪೇಗೌಡನಹಳ್ಳಿ, ಸೀಗೆಹಳ್ಳಿ, ಮೇಲೂರು, ಕೊಮ್ಮಸಂದ್ರ, ಹಿತ್ತಲಹಳ್ಳಿ, ಬೆಳ್ಳೂಟಿ, ಆನೂರು, ಬೋದಗೂರು, ಮುತ್ತೂರು, ಕಾಕಚೊಕ್ಕಂಡಹಳ್ಳಿ, ವೀರಾಪುರ, ಹೊಸಹುಡ್ಯ, ಗಂಗನಹಳ್ಳಿ, ಗಿಡ್ನಹಳ್ಳಿ ಸೇರಿದಂತೆ 35 ಗ್ರಾಮದ ಭಕ್ತರಿಂದ ಸರದಿಯಂತೆ ಹಗಲೂ ರಾತ್ರಿ ರಾಮಕೋಟಿ ಭಜನೆ ನಡೆಯಿತು. ಹತ್ತು ದಿನಗಳ ಕಾಲ ದಿನಕ್ಕೊಂದು ಗ್ರಾಮದಲ್ಲಿ ಭಜನೆ ಕಾರ್ಯಕ್ರಮವನ್ನು ನಡೆಸಲಾಗಿತ್ತು.
ಶನಿವಾರ ಗುರುಪೂರ್ಣಿಮಾ ಅಂಗವಾಗಿ ಕಾಕಡಾರತಿ, ಪಂಚಾಮೃತಾಭಿಷೇಕ, ಸತ್ಯನಾರಾಯಣಸ್ವಾಮಿ ಪೂಜೆ, ಸಾಯಿ ಹೋಮ, ದತ್ತಾತ್ರೇಯ ಹೋಮ, ಶ್ರೀರಾಮ ತಾರಕ ಹೋಮ, ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕು ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.
ತಾಲ್ಲೂಕಿನ ಮೂವ್ವತ್ತೈದು ಶಾಲೆ ಹಾಗೂ ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ರಾಮಕೃಷ್ಣ ವಿವೇಕಾನಂದ ಮಠದ ಪೂರ್ಣಾನಂದ ಸ್ವಾಮಿಗಳು ಮಾಡಿದರು. ವಿವಿಧ ಶಾಲೆಗಳ ಮಕ್ಕಳಿಗೆ ನೋಟ್‌ ಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಭಜನೆ ನಡೆಸಿದ ಗ್ರಾಮಸ್ಥರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿದರು. ತಾಲ್ಲೂಕಿನ ಹಿರಿಯ ಕಲಾವಿದರಾದ ಪಿಟೀಲು ವಿದ್ವಾನ್‌ ಹೊಸಪೇಟೆ ನಾರಾಯಣಾಚಾರ್‌, ಮೃದಂಗ ವಿದ್ವಾನ್‌ ವೆಂಕಟರಮಣಪ್ಪ ಅವರನ್ನು ಸನ್ಮಾನಿಸಲಾಯಿತು.
‘ಸಾಯಿನಾಥ ಜ್ಞಾನ ಮಂದಿರದಲ್ಲಿ ಹಲವಾರು ವರ್ಷಗಳಿಂದ ಗುರುಪೂರ್ಣಿಮಾ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ. ತಾಲ್ಲೂಕಿನ ಪ್ರತಿಭಾವಂತ ಮಕ್ಕಳನ್ನು ಈ ಸಂದರ್ಭದಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗುತ್ತಿದೆ. ಈ ವಿಶಿಷ್ಠ ದಿನ ಹೋಮ ಹವನಗಳನ್ನು ನಡೆಸಿ ವಿಶೇಷ ಪೂಜೆ ನಡೆಸುವುದರಿಂದ ಹೆಚ್ಚೆಚ್ಚು ಭಕ್ತರು ಆಗಮಿಸುತ್ತಾರೆ. ಎಲ್ಲರಿಗೂ ಪ್ರಸಾದವನ್ನು ವಿನಿಯೋಗಿಸುತ್ತಿದ್ದೇವೆ’ ಎಂದು ದೇವಾಲಯದ ಸಂಚಾಲಕ ನಾರಾಯಣಸ್ವಾಮಿ ತಿಳಿಸಿದರು.
ಸಾಯಿನಾಥ ಜ್ಞಾನ ಮಂದಿರದ ಸಂಸ್ಥಾಪಕ ಎಂ ವೆಂಕಟೇಶ್, ನೈರುತ್ಯ ರೇಲ್ವೆ ವಿಭಾಗೀಯ ಕಾರ್ಮಿಕ ಅಧಿಕಾರಿ ಟಿ.ಶಿವಣ್ಣ, ಡಿ.ಸಿ.ಪಿ ಕಚೇರಿಯ ಸಂಚಾರಿ ವಿಭಾಗದ ಮುಖ್ಯಸ್ಥೆ ಆರ್.ಮಂಜುಳ, ಮಳ್ಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮರೆಡ್ಡಿ, ಹಿರಿಯ ಜಾನಪದ ಕಲಾವಿದ ಎಂ.ಆರ್.ಲಕ್ಷೀಪತಿ, ಗೋವಿಂದಪ್ಪ, ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!