ಸಾರಿಗೆ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಡಿ.ವೈ.ಎಫ್.ಐ. ಸಂಘಟನೆಯ ಕಾರ್ಯಕರ್ತರು ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಹಳ್ಳಿ ಗ್ರಾಮದ ಬಳಿಯಲ್ಲಿ ಚಿಂತಾಮಣಿ ಬಾಗೇಪಲ್ಲಿ ಕಡೆಗಳಿಂದ ಬರುತ್ತಿದ್ದ ಸಾರಿಗೆ ಬಸ್ಸುಗಳನ್ನು ತಡೆದು ಬುಧವಾರ ಪ್ರತಿಭಟನೆ ನಡೆಸಿದರು.
ಕಳೆದ ಮೂರು ವರ್ಷಗಳಿಂದ ಪ್ರತಿಭಟನೆಗಳನ್ನು ಮಾಡುತ್ತಿದ್ದರೂ ಸಹ ತಾಲ್ಲೂಕಿನ ಗಂಗಹಳ್ಳಿ, ಬಾಳೇಗೌಡನಹಳ್ಳಿ, ಕಾಚಹಳ್ಳಿ, ಸೇರಿದಂತೆ ಹಲವು ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಭಾಗದಿಂದ ಶಿಡ್ಲಘಟ್ಟ, ಚಿಂತಾಮಣಿ, ಕಡೆಗಳಿಗೆ ಶಾಲಾ ಕಾಲೇಜುಗಳಿಗೆ ವಿಧ್ಯಾಭ್ಯಾಸಕ್ಕಾಗಿ ಹೋಗುವಂತಹ ವಿಧ್ಯಾರ್ಥಿಗಳು ಶಾಲೆಗಳನ್ನು ಬಿಟ್ಟು ಕೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ. ಇದಕ್ಕೆಲ್ಲಾ ಇಲಾಖೆಯ ಅಧಿಕಾರಿಗಳೆ ಕಾರಣ. ಈ ಭಾಗದ ಎಲ್ಲಾ ಹಳ್ಳಿಗಳಿಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವವರೆಗೂ ಬಸ್ಸುಗಳನ್ನು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶಿವಪ್ರಸಾದ್ ಬೇಟಿ ನೀಡಿ ಪ್ರತಿಭಟನಾ ನಿರತರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.
ಡಿ.ವೈ.ಎಫ್.ಐ. ಸಂಘಟನೆಯ ಪದಾಧಿಕಾರಿಗಳಾದ ಕುಂದಲಗುರ್ಕಿ ಮುನೀಂದ್ರ, ಲಕ್ಷ್ಮೀದೇವಮ್ಮ, ವೆಂಕಟೇಶ್, ಸದಾನಂದ, ರಾಜೇಂದ್ರ, ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!