29.5 C
Sidlaghatta
Monday, March 2, 2026

ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ

- Advertisement -
- Advertisement -

ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಖಾಲಿ ಮದ್ಯದ ಬಾಟಲ್ ಸಿಕ್ಕರೂ ದಂಡ ವಿಧಿಸಿ, ಎಚ್ಚರಿಕೆ ನೀಡಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಿವಮಲ್ಲಯ್ಯ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ಪೊಲೀಸರಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಂಗಡಿಗಳಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಯಲ್ಲಿ ಅಬಕಾರಿ ಅಧಿಕಾರಿಗಳು ಕ್ರಮ ಜರುಗಿಸಲು ಹಿಂದೆ ಬೀಳಬಾರದು. ಮಕ್ಕಳು ವಿದಸ್ಯಾಭ್ಯಾಸ ಮಾಡುವ ಶಾಲಾ ಕಾಲೇಜುಗಳ ಹತ್ತಿರದ ಅಂಗಡಿಗಳ ಬಗ್ಗೆಯೂ ಕಣ್ಣಿಡಬೇಕು ಎಂದರು.
ಈ ಸಂದರ್ಭದಲ್ಲಿ ಬೈರಗಾನಹಳ್ಳಿಯಲ್ಲಿ ಶೌಚಾಲಯ ಕಟ್ಟಿದ್ದರೂ ಹಣ ನೀಡಿಲ್ಲವೆಂದು ನಾರಾಯಣಸ್ವಾಮಿ ದೂರು ನೀಡಿದರು. ದಲಿತ ಮುಖಂಡ ಮುನಯ್ಯ ಉಚಿತ ನಿವೇಶನಗಳು ಕಡುಬಡವರಿಗೆ ಸಿಗುತ್ತಿಲ್ಲ ಉಳಖ್ಳವರ ಪಾಲಾಗುತ್ತಿದೆ ಎಂದು ದೂರಿದರು. ಯಣ್ಣೂರು ಬಸವರಾಜ್ ಸಾರ್ವಜನಿಕ ಕಣದ ಸ್ಥಳವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ದೂರನ್ನು ನೀಡಿದರು.
ಭ್ರಷ್ಟಾಚಾರ ನಿಗ್ರಹ ಪೊಲೀಸ್ ಅಧಿಕಾರಿ ಲಕ್ಷ್ಮೀದೇವಿ, ಗ್ರೇಡ್ 2 ತಹಶೀಲ್ದಾರ್ ಮುನಿಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!