16.1 C
Sidlaghatta
Monday, December 8, 2025

ಸಾರ್ವಜನಿಕ ಆಸ್ಪತ್ರೆಯಲ್ಲಿ ಉತ್ತಮ ಮತ್ತು ಉಚಿತ ಚಿಕಿತ್ಸೆ

- Advertisement -
- Advertisement -

ಪ್ರತಿಯೊಬ್ಬರಿಗೂ ಉತ್ತಮ ಮತ್ತು ಉಚಿತ ಚಿಕಿತ್ಸೆ ಸಿಗಬೇಕು ಎಂಬ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ೫೦ ರಿಂದ ೧೦೦ ಹಾಸಿಗೆಗಳಿಗೆ ಮೇಲ್ದರ್ಜೇಗೇರಿಸಿ ಸುಮಾರು ೩ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರೇಷ್ಮೆಯನ್ನೇ ನಂಬಿ ಕೂಲಿ ಮಾಡಿ ಜೀವನ ನಡೆಸುತ್ತಿರುವ ಜನತೆಗೆ ಉತ್ತಮ ಆರೋಗ್ಯ ದೊರೆಯಬೇಕು ಎಂಬ ನಿಟ್ಟಿನಲ್ಲಿ ಸುಮಾರು ೩ ಕೋಟಿ ರೊ ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ಉನ್ನತೀಕರಣ ಹಾಗೂ ಸುಮಾರು ೧೦ ಲಕ್ಷ ರೂ ವೆಚ್ಚದಲ್ಲಿ ಡಯಾಲಿಸಿಸ್ ಕೇಂದ್ರ ೮ ಲಕ್ಷ ರೂ ವೆಚ್ಚದಲ್ಲಿ ಡಿಜಿಟಲ್ ಎಕ್ಸರೇ ಕೇಂದ್ರ ಮತ್ತು ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರಿಗಾಗಿ ಉಪಹಾರ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.
ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ನೀಡುವ ದೃಷ್ಠಿಯಿಂದ ನಗರದ ಆಸ್ಪತ್ರೆಯ ಸಿಬ್ಬಂದಿ ಕೆಲಸ ಮಾಡುತ್ತಿದ್ದು ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮ ಚಿಕಿತ್ಸೆ ಇಲ್ಲಿ ದೊರೆಯಲಿದೆ. ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿದ್ದು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಂ.ಜಯರಾಮರೆಡ್ಡಿ, ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಸದಸ್ಯ ಅಪ್ಸರ್‌ಪಾಷ, ಪೌರಾಯುಕ್ತ ಜಿ.ಎನ್.ಚಲಪತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಸುನಿತಾ, ಲಕ್ಷ್ಮೀನಾರಾಯಣ, ಶ್ರೀನಿವಾಸ್‌, ಸಯ್ಯದ್‌ಬಾಬು, ಅಕ್ರಂಪಾಷ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!