ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಶಿವಯೋಗಿ ಸಿದ್ಧರಾಮ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಮುದಾಯದ ಮುಖಂಡರು ತಮ್ಮ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಸಿದ್ಧರಾಮ ಜಯಂತಿಯ ಆಚರಣೆಯು ಬೋವಿ ಸಮುದಾಯದವರ ಅಭಿವೃದ್ಧಿಗೆ ಪೂರಕವಾಗಿರುವಂತೆ ಆಚರಣೆ ಮಾಡಬೇಕು ಎಂದರು.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಜನವರಿ 15 ರಂದು ಸಿದ್ಧರಾಮ ಜಯಂತಿಯ ಆಚರಣೆಯನ್ನು ವಿಶೇಷವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ, ಬೋವಿ ಜನಾಂಗದ ಜಿಲ್ಲಾ ಉಪಾಧ್ಯಕ್ಷ ಎನ್.ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಚಿಕ್ಕನರಸಿಂಹಯ್ಯ, ಗೌರವಾಧ್ಯಕ್ಷ ಕೆ.ವಿ.ಚಲಪತಿ, ತಾಲ್ಲೂಕು ಉಪಾಧ್ಯಕ್ಷ ರಾಜಣ್ಣ, ಕಾರ್ಯದರ್ಶಿ ಎನ್.ನರಸಪ್ಪ ಮತ್ತಿತರರು ಹಾಜರಿದ್ದರು.