ಗ್ರಾಮೀಣ ಭಾಗದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಗುಣಮಟ್ಟದಲ್ಲಿ ಸ್ಥಳೀಯ ಗ್ರಾಮಸ್ಥರು ರಾಜಿಯಾಗಬಾರದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕತಟ್ಟಿ ಗ್ರಾಮದಲ್ಲಿ ಸ್ಥಳೀಯ ಶಾಸಕರ ಅನುದಾನ ಹಾಗೂ ಎಸ್ಸಿಪಿ ಹಾಗು ಟಿಎಸ್ಪಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗಳಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಉಪೇಕ್ಷಿಸದೆ ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಎಲ್ಲಾ ಗ್ರಾಮಸ್ಥರು ಬೆಳೆಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸಹಕರಿಸಬೇಕು ಎಂದರು.
ಜೆಡಿಎಸ್ ಮುಖಂಡ ಕೆ.ಮಂಜುನಾಥ್ ಮಾತನಾಡಿ, ಈ ಭಾಗದ ಮುಖಂಡರ ಹಾಗೂ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲು ಶಾಸಕರ ಅನುಧಾನದಲ್ಲಿ ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜೀಯಾಗದೇ ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರ ವಹಿಸಿ ಎಂದರು.
ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಶಿವಕುಮಾರ್, ಮುಖಂಡರಾದ ಶಿವಕುಮಾರ್, ದೇವರಾಜ್, ಮುನಿಯಪ್ಪ, ಎಂಪಿಸಿಎಸ್ ಅಧ್ಯಕ್ಷ ವಿ.ನಾರಾಯಣಸ್ವಾಮಿ, ವೆಂಕಟಪ್ಪ, ಗುತ್ತಿಗೆದಾರ ಎಂ.ಜೆ.ಶ್ರೀನಿವಾಸ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -