23.1 C
Sidlaghatta
Wednesday, February 18, 2026

ಸಿ.ಐ.ಟಿ.ಯು ನೇತೃತ್ವದಲ್ಲಿ ಅಂಗನವಾಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು ನೇತೃತ್ವದಲ್ಲಿ ಅಂಗನವಾಡಿ ಮತ್ತು ಗ್ರಾಮ ಪಂಚಾಯಿತಿ ನೌಕರರು ಬುಧವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಹಶೀಲ್ದಾರ್ ಎಂ.ದಯಾನಂದ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ನೀಡಬೇಕು. ಮೇ 17 ರಂದು ಶಿಕ್ಷಣ ಇಲಾಖೆ ಶಿಫಾರಸ್ಸು ಮಾಡಿದ ಆದೇಶವನ್ನು ರದ್ದುಪಡಿಸಬೇಕು. ಎಲ್ಲಾ ಅಸಂಘಟಿತ ವಲಯದ ನೌಕರರಿಗೆ 21 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಮಟ್ಟದಲ್ಲಿ ಕಾರ್ಮಿಕರ ಮುಖಂಡರನ್ನೊಳಗೊಂಡ ಕುಂದುಕೊರತೆ ಸಭೆ ನಡೆಸಬೇಕು. ಎಲ್ಲಾ ನೌಕರರಿಗೆ ಸೇವಾ ನಿಯಮಾವಳಿ, ಪಂಚಾಯಿತಿ ಸಿಬ್ಬಂದಿಯ ಸೇವಾ ಪುಸ್ತಕ ತೆರೆಯಬೇಕು. 45 ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸುಗಳಾದ ಸಾಮಾಜಿಕ ಭದ್ರತೆ, ಪೆನ್ಷನ್, ಹೆರಿಗೆ ಭತ್ಯ ಮೊದಲಾದ ಸೌಲಭ್ಯ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಮನವಿಯನ್ನು ಸ್ವೀಕರಿಸಿದ ತಹಶೀಲ್ದಾರ್ ಎಂ.ದಯಾನಂದ್, ಕಾರ್ಮಿಕರ ಮುಖಂಡರನ್ನೊಳಗೊಂಡ ಕುಂದುಕೊರತೆ ಸಭೆ ನಡೆಸುವ ಭರವಸೆ ನೀಡಿದರು.
ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ತಾಲ್ಲೂಕು ಅಧ್ಯಕ್ಷ ಶಂಕರಪ್ಪ, ಗುಲ್ಜಾರ್, ಫಯಾಜ್, ಅಂಗನವಾಡಿ ನೌಕರರ ತಾಲ್ಲೂಕು ಅಧ್ಯಕ್ಷೆ ಅಶ್ವತ್ಥಮ್ಮ, ಮುನಿರತ್ನ, ಭಾಗ್ಯಮ್ಮ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!