ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಪ್ರಗತಿ ಸಾಧಿಸಲು ಸಾಧ್ಯ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ತಲದುಮ್ಮನಹಳ್ಳಿ ಹಾಗು ಸುಗಟೂರು ಗ್ರಾಮಗಳಲ್ಲಿ ತಲಾ ೬ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿ.ಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದೀಗ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆವಹಿಸಿದ್ದು, ಕಾಲ ಕಾಲಕ್ಕೆ ಕಾಮಗಾರಿಯ ಮೇಲೆ ನಿಗಾವಹಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ವೀರಾಪುರ ಮುನಿರೆಡ್ಡಿ, ಮಳ್ಳೂರಯ್ಯ, ದೇವರಾಜ್, ಲೋಕೋಪಯೋಗಿ ಇಲಾಖೆಯ ಎಇಇ ಜಮೀರ್ಅಹಮ್ಮದ್, ಕೆ.ಬಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.