ನಗರದ ಚಿಂತಾಮಣಿ ರಸ್ತೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ 2019-20 ನೇ ಸಾಲಿನ 2 ನೇ ಹಂತದ ಸುಜ್ಞಾನನಿಧಿ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶೋಭ ಶಶಿಕುಮಾರ್ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ದಿ ಸೇರಿದಂತೆ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ನೂರಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಜೊತೆಗೆ ಸುಜ್ಞಾನನಿಧಿ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುತ್ತಿದ್ದು ಶಿಷ್ಯವೇತನವನ್ನು ಪಡೆದುಕೊಂಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆಯುವ ಜೊತೆಗೆ ಸಮಾಜದಲ್ಲಿ ಮಾದರಿಯಾಗಿ ಬೆಳೆಯಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಸಂತ್.ಬಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಈಗಾಗಲೇ ರಾಜ್ಯಾಧ್ಯಂತ 36,000 ವಿದ್ಯಾರ್ಥಿಗಳಿಗೆ ಸುಮಾರು 45 ಕೋಟಿ ರೂನಷ್ಟು ಶಿಷ್ಯವೇತನ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನಾಧ್ಯಂತ ಸುಮಾರು 39 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿದ್ದು ವಿದ್ಯಾರ್ಥಿಗಳ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
9 ಮಂದಿ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಮಂಜೂರಾತಿ ಪತ್ರ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇಧಿಕೆ ಸದಸ್ಯ ಎ.ಎಂ.ತ್ಯಾಗರಾಜ್, ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ಕುಮಾರ್, ಕೃಷಿ ಮೇಲ್ವಿಚಾರಕ ಹರೀಶ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -