ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಬೈರಸಂದ್ರ ಗ್ರಾಮದ ಗೇಟ್ ಬಳಿ ಅಪರಿಚಿತ ಲಾರಿಯೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಜಂಗಮಕೋಟೆ ಹೊರವಲಯದ ಪೋಲೀಸ್ ಠಾಣೆ ವ್ಯಾಪ್ತಿಯ ಬೈರಸಂದ್ರ ಗೇಟ್ ಬಳಿ ಸೋಮವಾರ ರಾತ್ರಿ ಲಾರಿಯೊಂದಕ್ಕೆ (ಕೆಎ ೦೩ ೬೧೮) ಯಾರೋ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಸ್ಥಳದಲ್ಲಿ ಬೆಂಕಿ ಹಚ್ಚಿರುವ ಲಾರಿ ಮಾತ್ರವಿದ್ದು ಲಾರಿಯ ಚಾಲಕ ಅಥವ ಕ್ಲೀನರ್ ಯಾರೂ ಇಲ್ಲದಿರುವುದರಿಂದ ಲಾರಿ ಯಾರದ್ದು, ಲಾರಿಗೆ ಬೆಂಕಿ ಇಟ್ಟವರಾರು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಲ್.ಶ್ರೀನಿವಾಸಮೂರ್ತಿ ಹಾಗೂ ಪುರ ಠಾಣೆ ಸಬ್ಇನ್ಸ್ಪೆಕ್ಟರ್ ವಿಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -
- Advertisement -
- Advertisement -
- Advertisement -