21.2 C
Sidlaghatta
Friday, July 18, 2025

ಸ್ತ್ರೀ ಶಕ್ತಿ ಭವನದಲ್ಲಿ ವಿಶೇಷ ಮಕ್ಕಳ “ಮಕ್ಕಳೋತ್ಸವ” ಕಾರ್ಯಕ್ರಮ

- Advertisement -
- Advertisement -

ವಿಶೇಷ ಚೇತನರ ಆರೈಕೆ ಮಾಡುವುದರಲ್ಲಿ ತೊಡಗಿಸಿಕೊಂಡಿರುವವರ ತಾಳ್ಮೆ ಮೆಚ್ಚುವಂತಹದ್ದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್ ತಿಳಿಸಿದರು.
ನಗರದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ಜಿಲ್ಲಾ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂಗವಿಕಲ ಮಕ್ಕಳ “ಮಕ್ಕಳೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ವಾರ್ಷಿಕೋತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲಾಗುತ್ತದೆ. ಆದರೆ ಅಂಗವಿಕಲ ಮಕ್ಕಳು ಇದರಿಂದ ಹೊರಗುಳಿಯುತ್ತಾರೆ. ಹಾಗಾಗಿ ಅಂಗವಿಕಲ ಮಕ್ಕಳನ್ನು ಪ್ರೋತ್ಸಾಹಿಸಲು ವಿಶೇಷ ಮಕ್ಕಳ ಮಕ್ಕಳೋತ್ಸವ ಆಚರಿಸಲಾಗುತ್ತಿದೆ. ವಿಶೇಷ ಚೇತನ ಮಕ್ಕಳು ಸಂಗೀತ, ನೃತ್ಯ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿರುವುದನ್ನು ಕಾಣಬಹುದು. ಇವರ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ಆರೋಗ್ಯವಂತ ಮಗುವನ್ನು ಹೆತ್ತು ಪಾಲಿಸುವುದು ಎಲ್ಲಾ ದಂಪತಿಗಳ ಬಯಕೆ. ಭಾವೀ ತಂದೆ-ತಾಯಿಯರ ಮಾನಸಿಕ ಹಾಗೂ ದೈಹಿಕ ಆರೋಗ್ಯ, ಹುಟ್ಟುವ ಮಗುವಿನ ಮೇಲೆ ಪ್ರಭಾವ ಬೀರುವುದು ಖಚಿತವಾಗಿದ್ದು, ಈಗ ಗರ್ಭಪೂರ್ವ ಆರೈಕೆ ಕೂಡ ಪ್ರಾಮುಖ್ಯತೆಯನ್ನು ಹೊಂದಿದೆ. ಮಹಿಳೆಯ ಆರೋಗ್ಯ ರಕ್ಷಣೆ, ಆಹಾರ ಸೇವನೆ ಮುಂತಾದ ಚಟುವಟಿಕೆಗಳು ಮಗುವಿನ ಸ್ವಾಸ್ಥ್ಯದ ಮೇಲೆ ಪ್ರಭಾವ ಬೀರಬಲ್ಲವು. ಈ ಬಗ್ಗೆ ಆಶಾಕಾರ್ಯಕರ್ತೆಯರ, ವೈದ್ಯರ ನೆರವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಿಡಿಪಿಒ ಲಕ್ಷ್ಮಿದೇವಮ್ಮ ಮಾತನಾಡಿ, ಅಂಗವಿಕಲರು ಎಲ್ಲ ಸೌಲಭ್ಯ ಪಡೆಯಲು ಅರ್ಹರಾಗಿದ್ದು, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದು ಹೇಳಿದರು.
ವಿಶೇಷ ಮಕ್ಕಳಿಗಾಗಿ ಆಯೋಜಿಸಿದ್ದ ಚಿತ್ರಕಲೆ, ವೇಷಭೂಷಣ ಮುಂತಾದ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಪ್ರಶಂಸಾ ಪತ್ರ ಹಾಗೂ ೩೦೦ ರೂ ನಗದು ಬಹುಮಾನವನ್ನು ವಿತರಿಸಲಾಯಿತು.
ಜಿಲ್ಲಾ ಅಂಗವಿಕಲರ ಇಲಾಖೆ ಅಧಿಕಾರಿ ಜ್ಯೋತಿ, ಆಶಾಕಿರಣ ಅಂಧಮಕ್ಕಳ ಶಾಲೆಯ ವ್ಯವಸ್ಥಾಪಕ ಗೋಪಾಲಪ್ಪ, ಶಿಖ್ಶಕರಾದ ಶೋಭ, ಚಂದ್ರಕಲಾ, ಅನ್ನಪೂರ್ಣ, ಜಗದೀಶ್, ಗೋಪಾಲ್, ಮಹೇಶ್, ಚಿತ್ರಕಲಾ ಶಿಕ್ಷಕರಾದ ಅಶ್ವತ್ಥನಾರಾಯಣ, ಶಶಿಧರ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!