ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡವುಂತಹ ಮಹಿಳಾ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಯಾವ ಯಾವ ಹಂತದಲ್ಲಿ ಯಾವ ಕೆಲಸ ನಿರ್ವಹಿಸಬೇಕು ಎನ್ನುವುದನ್ನು ತಿಳಿಸಿಕೊಡಲು ಸರ್ಕಾರ ಉಪಗ್ರಹ (ಸ್ಯಾಟಲೈಟ್) ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಆರೋಗ್ಯ ಮೇಲ್ವಿಚಾರಕಿ ಸಿ.ಮುನಿರತ್ನಮ್ಮ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರಿಗಾಗಿ ಏರ್ಪಡಿಸಲಾಗಿದ್ದ ಸ್ಯಾಟಲೈಟ್ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಆರೋಗ್ಯ ಸಹಾಯಕಿಯರೂ ಹಾಗೂ ಆಶಾ ಕಾರ್ಯಕರ್ತೆಯರು ಸಮುದಾಯದ ಆರೋಗ್ಯದ ಕುರಿತು ಮಾಹಿತಿ ನೀಡುವ ಕೆಲಸ ಮಾಡುತ್ತಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು, ಗರ್ಭಿಣಿಯರಿಗೆ ಕಾಲ ಕಾಲಕ್ಕೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವುದು, ಆರೋಗ್ಯ ಸಂಬಂಧಿ ಸಲಹೆಗಳು, ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗುತ್ತದೆ.
ಗರ್ಭಿಣಿಯರ ಆರೈಕೆ ಹಾಗೂ ಬಾಣಂತಿಯರ ಆರೈಕೆಯಲ್ಲಿ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಯಾವ ರೀತಿ ಪಾಲನೆ ಮಾಡಬೇಕು ಎನ್ನುವುದನ್ನು ಈ ಸ್ಯಾಟಲೈಟ್ ತರಬೇತಿ ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಗುತ್ತಿದೆ ಎಂದರು.
ಕಾರ್ಯಾಗಾರದಲ್ಲಿ ಆರೋಗ್ಯ ಮೇಲ್ವಿಚಾರಕಿ ಎನ್.ಗೀತಾ, ಎಸ್ಬಿಎಂ ತಾಲ್ಲೂಕು ಸಾಕ್ಷರತಾ ಸಲಹೆಗಾರ ನಾರಾಯಣಸ್ವಾಮಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -