Home News ಸ್ವಚ್ಚತೆ ಕಾಣದೇ ಅವ್ಯವಸ್ಥೆಯಿಂದ ಕೂಡಿರುವ ಚರಂಡಿಗಳು

ಸ್ವಚ್ಚತೆ ಕಾಣದೇ ಅವ್ಯವಸ್ಥೆಯಿಂದ ಕೂಡಿರುವ ಚರಂಡಿಗಳು

0

ತಾಲ್ಲೂಕಿನ ಹೊಸಪೇಟೆ ಗ್ರಾಮದ ಮುಖ್ಯ ರಸ್ತೆಯಲ್ಲಿನ ಪಕ್ಕದಲ್ಲಿರುವ ಕಾಲೋನಿಯಲ್ಲಿ ಚರಂಡಿಯು ಸ್ವಚ್ಚತೆ ಕಾಣದೇ ಅವ್ಯವಸ್ಥೆಯಿಂದ ಕೂಡಿದೆ.
ಇದರಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ಸ್ವಚ್ಚತಾ ಅಭಿಯಾನ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಹಣ ಮೀಸಲು ಇಟ್ಟಿದ್ದರೂ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಮಳೆ ಬಂದರೆ ಕೆಲ ಚರಂಡಿಗಳಲ್ಲಿ ನೀರು ತುಂಬಿ ಮನೆಗಳಿಗೆ ನುಗ್ಗುತ್ತಿದ್ದು ಜನರು ವಾಸಿಸಲು ಸಾದ್ಯವಾಗುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರುತ್ತಾರೆ.

ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಗ್ರಾಮದ ಚರಂಡಿಗಳ ದುಸ್ಥಿತಿ

ಚರಂಡಿ ತುಂಬಾ ತ್ಯಾಜ್ಯ ತುಂಬಿದೆ ಮತ್ತು ಗಿಡಗಳುಬೆಳೆದಿವೆ. ಸೊಳ್ಳೆ ಕಾಟದಿಂದ ಡೆಂಗ್ಯೂ ಜ್ವರ ಕೆಲವರಿಗೆ ಕಂಡುಬಂದಿದ್ದು ಆಸ್ವತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಧಿಕಾರಿಗಳನ್ನು ವಿಚಾರಿಸಿದರೆ ಚರಂಡಿಗಳನ್ನು ಸ್ವಚ್ಚತೆ ಮಾಡಲು ಗ್ರಾಮ ಪಂಚಾಯಿತಿಯಲ್ಲಿ ಹಣ ಇಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ ಎಂದು ಮುನಿರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಅಧಿಕಾರಿಗಳ ವರ್ತನೆಯಿಂದ ಬೇಸತ್ತ ಜನರು, ಚರಂಡಿಯ ಸ್ವಚ್ಛತೆಯ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಮುಂದೆ ಆಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ನೇರ ಜವಾಬ್ದಾರಿಯಾಗಿರುತ್ತಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

error: Content is protected !!