20.6 C
Sidlaghatta
Thursday, July 31, 2025

ಸ್ವಚ್ಛತೆಯಿಂದ ಆರೋಗ್ಯ – ಜಾಗತಿಕ ಕೈ ಸ್ವಚ್ಛತಾ ದಿನ ಕಾರ್ಯಕ್ರಮ

- Advertisement -
- Advertisement -

ಎಲ್ಲಿ ಸ್ವಚ್ಛತೆಯಿರುತ್ತದೆಯೋ ಅಲ್ಲಿ ಆರೋಗ್ಯವಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಸರ್ವೋದಯ ಸ್ವಯಂ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ನರೇಶ್ಕುಮಾರ್ ಹೇಳಿದರು.
ನಗರದ ಐಟಿಐ ಕಾಲೇಜಿನ ಆವರಣದಲ್ಲಿ ಗುರುವಾರ ನೆಹರೂ ಯುವ ಕೇಂದ್ರ ಹಾಗೂ ಸರ್ವೋದಯ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗತಿಕ ಕೈ ಸ್ವಚ್ಚತಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕ ಜೀವನಶೈಲಿಗೆ ಹೊಂದಿಕೊಂಡಿರುವ ನಾವುಗಳು ನಮ್ಮ ವೈಯಕ್ತಿಕ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದೇವೆ ಎಂದರು.
ಪ್ರತಿಯೊಬ್ಬರೂ ಊಟಕ್ಕೆ ಮುಂಚೆ ಹಾಗು ಶೌಚದ ನಂತರ ಕಡ್ಡಾಯವಾಗಿ ಸೋಪಿನಿಂದ ಕೈ ತೊಳೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಜನರಲ್ಲಿ ಅದರಲ್ಲಿಯೂ ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗತಿಕ ಕೈ ಸ್ವಚ್ಚತಾ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಾಮಾನ್ಯವಾಗಿ ಮನೆಗಳಲ್ಲಿ, ತೋಟಗಳಲ್ಲಿ ದುಡಿದು ಬಂದಂತಹವರು ಊಟಕ್ಕೆ ಮುಂಚೆ ಬರೀ ನೀರಿನಲ್ಲಿ ಕೈ ತೊಳೆದು ಊಟ ಮಾಡುತ್ತರೆ. ಒಮ್ಮೊಮ್ಮೆ ಕೈ ತೊಳೆಯದೇ ಊಟ ಮಾಡುತ್ತಾರೆ. ಹೀಗೆ ಮಾಡುವುದರಿಂದ ಕೈಯಲ್ಲಿರುವ ವೈರಾಣುಗಳು ಊಟದೊಂದಿಗೆ ಹೊಟ್ಟೆ ಸೇರಿ ವಿವಿಧ ಖಾಯಿಲೆಗಳಿಗೆ ತುತ್ತಾಗುತ್ತಾರೆ. ಪ್ರತಿಯೊಬ್ಬರೂ ಕೈಗಳನ್ನು ಸೋಪಿನಿಂದ ತೊಳೆಯುವದನ್ನು ರೂಡಿಸಿಕೊಳ್ಳುವುದರೊಂದಿಗೆ ನೈರ್ಮಲ್ಯದಿಂದಾಗುವ ಅನಾಹುತಗಳನ್ನು ತಪ್ಪಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲ ರವೀಂದ್ರನಾಥ್, ಕಾಲೇಜಿನ ಪ್ರಾಧ್ಯಾಪಕರಾದ ಶ್ರೀನಿವಾಸ್, ಗಿರೀಶ್, ಸುಜಾತ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!