21.1 C
Sidlaghatta
Tuesday, October 28, 2025

ಸ್ವಯಂಪ್ರೇರಿತ ರಕ್ತದಾನ ಶಿಬಿರ

- Advertisement -
- Advertisement -

ಮಾನವನ ರಕ್ತ ಅಮೂಲ್ಯವಾದುದು. ಇದು ಮನುಷ್ಯನ ಜೀವ ಉಳಿಸುತ್ತದೆ, ರಕ್ತದಾನಕ್ಕೆ ಪರ್ಯಾಯ ವಸ್ತುವೆಂದರೆ ರಕ್ತ ಒಂದೇ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ನಟ ಮೆಗಾಸ್ಟಾರ್ ಚಿರಂಜೀವಿಯ 60 ನೇ ಹುಟ್ಟುಹಬ್ಬದ ಪ್ರಯುಕ್ತ ರೆಡ್ಕ್ರಾಸ್ ಸೊಸೈಟಿ ಮತ್ತು ಚಿರಂಜೀವಿ ಅಭಿಮಾನಿಗಳಿಂದ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಕಾಳಜಿಯಿಂದ ವಿವಿಧ ಸಂಘಟನೆಗಳು ತಾಲ್ಲೂಕಿನಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ನಮ್ಮ ಜಿಲ್ಲೆಯಲ್ಲೇ ಶಿಡ್ಲಘಟ್ಟ ತಾಲ್ಲೂಕು ರಕ್ತದಾನದಲ್ಲಿ ಮುಂದಿದೆ. ಜಿಲ್ಲೆಯ ರೋಗಿಗಳಿಗೆ ಇದು ಉಪಕಾರಿಯಾಗಿದೆ ಎಂದು ಹೇಳಿದರು.
ನಗರದ ಸಲ್ಲಾಪುರಮ್ಮ ದೇವಾಲಯದ ಬಳಿ ಚಿರಂಜೀವಿ ಅಭಿಮಾನಿಗಳಿಂದ ಅನ್ನದಾನವನ್ನು ಏರ್ಪಡಿಸಲಾಗಿತ್ತು. ಆಸ್ಪತ್ರೆಯ ಹೊರ ರೋಗಿಗಳಿಗೆ ಹಣ್ಣನ್ನು ಹಂಚಲಾಯಿತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್ಕುಮಾರ್, ರೆಡ್ಕ್ರಾಸ್ ಸೊಸೈಟಿ ತಾಲ್ಲೂಕು ಕಾರ್ಯದರ್ಶಿ ಗುರುರಾಜರಾವ್, ಸಬ್ಇನ್ಸ್ಪೆಕ್ಟರ್ ವಿಜಯ್ರೆಡ್ಡಿ, ಚಿರಂಜೀವಿ ಅಭಿಮಾನಿಗಳ ಸಂಘದ ದಿನೇಶ್ಬಾಬು, ದೇವರಾಜ್, ಮಂಜುನಾಥ್, ಶಬೀವುಲ್ಲಾ, ರಾಧಾಕೃಷ್ಣ, ಶ್ರೀನಿವಾಸ್, ರೆಡ್ಕ್ರಾಸ್ ಸೊಸೈಟಿಯ ಡಾ.ಚಕ್ರವರ್ತಿ, ಅಕ್ಕಲರೆಡ್ಡಿ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!