ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರಿಂದ ಅಪಘಾತ ಸೇರಿದಂತೆ ಪ್ರಸವ ವೇದನೆಯ ಸಮಯದಲ್ಲಿರುವ ಗರ್ಭಿಣಿ ಮಹಿಳೆಯರ ಜೀವವುಳಿಸಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಎಂ.ರಾಜಣ್ಣ ಅಭಿಮಾನಿಗಳ ಸಂಘದಿಂದ ಶಾಸಕ ಎಂ.ರಾಜಣ್ಣ ಅವರು 55 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗು ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೆ ಮುಂದುವರೆದರೂ ಪ್ರಕೃತಿದತ್ತವಾಗಿ ಮಾನವನ ಶರೀರದಲ್ಲಿ ಉತ್ಪತ್ತಿಯಾಗುವಂತಹ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಾಗುವುದಿಲ್ಲ. ಮಾನವನ ರಕ್ತವನ್ನು ಹೊರತುಪಡಿಸಿ ಬೇರೆ ಯಾವುದೇ ಜೀವಿಗಳ ರಕ್ತವನ್ನು ಬೇರೊಬ್ಬರಿಗೆ ನೀಡಲಾಗುವುದಿಲ್ಲ.
ಹಾಗಾಗಿ ಶ್ರೇಷ್ಟವಾಗಿರುವ ಮಾನವನ ರಕ್ತವನ್ನು ಒಬ್ಬರಿಂದ ಮತ್ತೊಬ್ಬರಿಗೆ ದಾನವಾಗಿ ನೀಡುವುದರಿಂದ ಇನ್ನೊಬ್ಬರ ಜೀವ ಉಳಿಸುವುದಷ್ಟೇ ಅಲ್ಲದೇ ರಕ್ತದಾನ ಮಾಡುವವರ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ ಎಂದರು.
ನಗರಸಭೆ ಅಧ್ಯಕ್ಷ ಅಪ್ಸರ್ಪಾಷ ಮಾತನಾಡಿ ರಕ್ತದಾನ ದಂತಹ ಮತ್ತೊಂದು ದಾನ ಪ್ರಪಂಚದಲ್ಲಿ ಬೇರೊಂದಿಲ್ಲ, ಆರೋಗ್ಯವಂತ ವ್ಯಕ್ತಿ ಸೇರಿದಂತೆ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಬೇಕು. ರಾಜಕೀಯ ಮುಖಂಡರ ಹಾಗು ಸಮಾಜದಲ್ಲಿನ ಗಣ್ಯವ್ಯಕ್ತಿಗಳ ಜನ್ಮದಿನಾಚರಣೆ ಕಾರ್ಯಕ್ರಮಗಳಲ್ಲಿ ಈ ರೀತಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವುದರಿಂದ ಹಲವರ ಜೀವ ಕಾಪಾಡಿದ ತೃಪ್ತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಎಂ.ರಾಜಣ್ಣರಿಗೆ ತಹಸೀಲ್ದಾರ್ ಎಸ್.ಅಜಿತ್ಕುಮಾರ್ ರೈ, ಜಿ.ಪಂ ಸದಸ್ಯ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ಅಪ್ಸರ್ಪಾಷ, ತಾ.ಪಂ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ಸುನೀತಾ, ಸೇರಿದಂತೆ ಗಣ್ಯರು ಹೂಗುಚ್ಚ ನೀಡಿ ಅಭಿನಂದಿಸಿದರು.
ಶಾಸಕ ಎಂ.ರಾಜಣ್ಣ ಅಭಿಮಾನಿಗಳು ಹಾಗು ಜೆಡಿಎಸ್ ಕಾರ್ಯಕರ್ತರಿಂದ ಆಸ್ಪತ್ರೆಯಲ್ಲಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಎನ್.ಕೆ. ಗುರುರಾಜರಾವ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಅನಿಲ್ಕುಮಾರ್, ನಗರಸಭೆ ಸದಸ್ಯ ವೆಂಕಟಸ್ವಾಮಿ, ತಾ.ಪಂ ಸದಸ್ಯ ನಾರಾಯಣಸ್ವಾಮಿ, ಮುಖಂಡರಾದ ಬಶೆಟ್ಟಹಳ್ಳಿ ವೆಂಕಟೇಶ್, ಕೆ.ಎಸ್. ಕನಕಪ್ರಸಾದ್, ಮುನಿರೆಡ್ಡಿ, ಮಳ್ಳೂರಯ್ಯ, ಕೆ.ಬಿ.ಮಂಜುನಾಥ, ಮಸ್ತಾನ್, ಅಫ್ಜಲ್ಪಾಷ, ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -