Home News ಸ್ವಾತಂತ್ರ್ಯಾನಂತರ ಅಭಿವೃದ್ಧಿಯಲ್ಲಿ ನೆಹರೂ ಕೊಡುಗೆ ಅಪಾರ

ಸ್ವಾತಂತ್ರ್ಯಾನಂತರ ಅಭಿವೃದ್ಧಿಯಲ್ಲಿ ನೆಹರೂ ಕೊಡುಗೆ ಅಪಾರ

0

ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾದ ಆರ್ಥಿಕಯೋಜನೆ, ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ನೆಹರೂ ನೀಡಿದ ಕೊಡುಗೆ ಅಪಾರವಾದುದು ಎಂದು ವಿದ್ಯಾರ್ಥಿ ಎಸ್.ಪ್ರಜ್ವಲ್ ತಿಳಿಸಿದರು.
ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಎಸ್ಡಿಎಂಸಿ ವತಿಯಿಂದ ಮಕ್ಕಳಿಗಾಗಿ ಮಕ್ಕಳಿಂದಲೇ ರೂಪಿಸಿದ್ದ, ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮಹಾತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಆತ್ಮಸ್ಥೈರ್ಯದಿಂದ ಗುರಿಯನ್ನು ತಲುಪಬೇಕು. ಶಾಲಾಶಿಕ್ಷಣವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳನ್ನು ಕಲಿಸುವ ಪಠ್ಯಕ್ರಮ ಬರಬೇಕು ಎಂದು ಅವರು ತಿಳಿಸಿದರು.
ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಗುಣಾತ್ಮಕ ಶಿಕ್ಷಣ ಸಾಧಿಸಲು ಸರ್ಕಾರಗಳು ಒದಗಿಸುವ ಯೋಜನೆ, ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮಶಿಕ್ಷಣ ಪಡೆಯಬೇಕು. ಸ್ವಾಭಿಮಾನದ ಬದುಕು ಸಾಗಿಸಲು ಮುಂದಾಗಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿ ಶಿಕ್ಷಕರು ಮತ್ತು ಪೋಷಕರು ಶ್ರಮಿಸಬೇಕು. ಪ್ರಥಮ ಪ್ರಧಾನಿಯಾಗಿ ನೆಹರೂ ಅವರು ವ್ಯವಸಾಯ, ನೀರಾವರಿ, ಶಿಕ್ಷಣ, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿದ್ಯಾರ್ಥಿಗಳಾದ ಎಸ್.ಆರ್.ಲಿಖಿತ್ಗೌಡ, ಎಸ್.ಆರ್.ಮೊನಿಷಾ, ಎಂ.ಮಾರುತೇಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷ ಎನ್.ಪಿ.ನಾಗರಾಜಪ್ಪ, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಎಂ.ವೈ.ಲಕ್ಷ್ಮಯ್ಯ, ಶಿಕ್ಷಕಿ ಕೆ.ಎಲ್.ಅನಿತಾ ಹಾಜರಿದ್ದರು.
 

error: Content is protected !!