19.1 C
Sidlaghatta
Friday, November 14, 2025

ಸ್ವಾತಂತ್ರ್ಯ ಹೋರಾಟಗಾರ ಶ್ರೀ ಬಿ.ಕೆ.ಚಂಗಲ್‌ರಾವ್ ನಿಧನ.

- Advertisement -
- Advertisement -

ಕಳೆದ ಎರಡು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಬಚ್ಚಹಳ್ಳಿಯ ಬಿ.ಕೆ.ಚಂಗಲ್‌ರಾವ್(೯೪)ರವರು ಬುಧವಾರ ಬೆಳಗ್ಗೆ ೫ ಗಂಟೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಐವರು ಪುತ್ರಿಯರು, ನಾಲ್ವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹುಟ್ಟೂರು ಬಚ್ಚಹಳ್ಳಿಯಲ್ಲಿ ಮೃತರ ಅಂತ್ಯ ಸಂಸ್ಕಾರ ನಡೆಯಿತು.
ತಾಲ್ಲೂಕು ಆಡಳಿತದ ಪರವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಮೃತರಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಮಾಜಿ ಅಡ್ವೊಕೇಟ್ ಜನರಲ್ ಹಾರ್‍ನಳ್ಳಿ ಅಶೋಕ್, ಶಾಸಕ ಎಂ.ರಾಜಣ್ಣ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಅಪಾರ ಬಂಧು ಬಳಗ, ಅಭಿಮಾನಿಗಳ ಸಾಕ್ಷಿಯಲ್ಲಿ ಅಂತಿಮ ಸಂಸ್ಕಾರದ ವಿದಿವಿಧಾನಗಳನ್ನು ಪೂರೈಸಲಾಯಿತು.

ಶ್ರೀ ಬಿ.ಕೆ.ಚಂಗಲ್‌ರಾವ್ ರ ಕುರಿತಾದ ಲೇಖನವನ್ನು ಇಲ್ಲಿ ಓದಬಹುದು

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!