ಸ್ವಾವಲಂಬನೆ ಜೀವನ ನಡೆಸಿ – ಅಸಿಸ್ಟೆಂಟ್‌ ಸಬ್‌ಇನ್ಸ್‌ಪೆಕ್ಟರ್‌ ನಂಜುಂಡಪ್ಪ

- Advertisement -
- Advertisement -

ಸ್ವಾವಲಂಬನೆ ಜೀವನ ನಡೆಸಲು ವಿವಿಧ ಯೋಜನೆಗಳು ಅಭ್ಯವಿದ್ದು ಸದುಪಯೋಗಪಡಿಸಿಕೊಳ್ಳುವಂತೆ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಅಸಿಸ್ಟೆಂಟ್‌ ಸಬ್‌ಇನ್ಸ್‌ಪೆಕ್ಟರ್‌ ನಂಜುಂಡಪ್ಪ ಹೇಳಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಮ ಸಮಾಲೋಚನಾ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿ ಬದುಕಿನಲ್ಲಿ ಉತ್ತಮ ಶಿಕ್ಷಣ, ಹಿರಿಯರ ಮಾರ್ಗದರ್ಶನ ಹಾಗೂ ಶಿಸ್ತು ಅಳವಡಿಸಿಕೊಂಡಲ್ಲಿ ಮಾತ್ರ ಸಮಾಜದಲ್ಲಿ ಉತ್ತಮ ಜೀವನ ನಡೆಸಬಹುದು ಎಂದರು.
ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಗುಂಪುಗಳನ್ನು ರಚಿಸಿ ಅವರಿಗೆ ಟೈಲರಿಂಗ್, ಪ್ರಸೂತಿ ತರಬೇತಿ ನೀಡಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಸಂಸ್ಥೆಯ ವತಿಯಿಂದ ರೂಪಿಸಲಾಗುವುದು ಎಂದು ತಿಳಿಸಿದರು.
ಸಾದಲಿ ವಲಯದ ಮೇಲ್ವಿಚಾರಕ ಗಣೇಶ್, ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್.ರಾಜಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ಎಚ್.ಮಂಜುನಾಥ, ಡಿ.ಸಿ.ರಾಮಚಂದ್ರ, ಗ್ರಾಮದ ಹಿರಿಯ ಬಿ.ಚಿಕ್ಕಪ್ಪಯ್ಯ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!