Home News ಸ್ವಾವಲಂಬಿಗಳಾಗಲು ತರಬೇತಿ

ಸ್ವಾವಲಂಬಿಗಳಾಗಲು ತರಬೇತಿ

0

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಕೇಂದ್ರದ ಮೂಲಕ ಮಾಹಿತಿ ಹಾಗೂ ಸೇವೆಯನ್ನು ಒದಗಿಸುತ್ತಿದ್ದು ಅನುಕೂಲಕರವಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಎಲ್.ಜಮುನಾ ಧರ್ಮೇಂದ್ರ ತಿಳಿಸಿದರು.

ಮೇಲೂರು ಪಂಚಾಯತಿಯ ವಿವಿಧ ಗ್ರಾಮಗಳ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದ್ದರು.
ಮೇಲೂರು ಪಂಚಾಯತಿಯ ವಿವಿಧ ಗ್ರಾಮಗಳ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದ್ದರು.
ತಾಲ್ಲೂಕಿನ ಮೇಲೂರು ಗ್ರಾಮದ ಗಂಗಾದೇವಿ ಸಮುದಾಯ ಭವನದಲ್ಲಿ ಈಚೆಗೆ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ವತಿಯಿಂದ ಮೇಲೂರು ಪಂಚಾಯತಿಯ ವಿವಿಧ ಗ್ರಾಮಗಳ ನಿರುದ್ಯೋಗ ಯುವಕ ಯುವತಿಯರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಿದ್ದ ಉದ್ಯಮಶಿಲತಾ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿರುದ್ಯೋಗಿ ಯುವಕ–ಯುವತಿಯರಿಗೆ ತರಬೇತಿ ಮತ್ತು ಸ್ವ–ಉದ್ಯೋಗಾವಕಾಶ ಕಲ್ಪಿಸುವ ಏಕೈಕ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದ್ದು, ತರಬೇತಿ ಪೂರ್ಣಗೊಳಿಸಿದ ನಂತರದ ಎರಡು ವರ್ಷಗಳ ಕಾಲ ಪೋಷಕ ಸಂಸ್ಥೆಯಂತೆ ಆಶ್ರಯಕ್ಕೆ ಬ್ಯಾಂಕ್ ನಿಲ್ಲುತ್ತದೆ. ತರಬೇತಿ ಪಡೆದ ವ್ಯಕ್ತಿಯು ಸ್ವಾವಲಂಬಿಯಾಗುವವರೆಗೆ ಸಂಸ್ಥೆಯಿಂದ ಪ್ರೋತ್ಸಾಹ ಮತ್ತು ಮಾರ್ಗದರ್ಶನ ದೊರೆಯುತ್ತದೆ. ಇದರ ಸದುಪಯೋಗ ಮಾಡಿಕೊಳ್ಳುವಂತೆ ಅವರು ಹೇಳಿದರು.
ಸಂಸ್ಥೆಯ ನಿರ್ದೇಶಕ ಗುರುದಾಸ್ ಪೈ ತರಬೇತಿ ಕೇಂದ್ರದ ಬಗ್ಗೆ ವಿವರಿಸಿದರು. ಸಂಸ್ಥೆಯ ಉಪನ್ಯಾಸಕ ನಾರಾಯಣಸ್ವಾಮಿ, ತರಬೇತಿ ಅವಶ್ಯಕತೆ, ಉದ್ಯಮಶೀಲತೆ ಗುಣಗಳು, ಅವಕಾಶಗಳು, ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಗಂಗಾದೇವಿ ಸಮುದಾಯ ಭವನದ ಅಧ್ಯಕ್ಷ ರಾಮಕೃಷ್ಣಪ್ಪ, ಎಲ್.ಎನ್.ಮೂರ್ತಿ, ಅಶ್ವತ್ಥಪ್ಪ, ಮಹಿಳಾ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.