ನಗರದ ನಗರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಸಿಐಟಿಯು ನೇತೃತ್ವದಲ್ಲಿ ಜಲಗಾರರು ಮಾಡುತ್ತಿರುವ ಅನಿರ್ಧಿಷ್ಠ ಹೋರಾಟ ಹತ್ತನೇ ದಿನವಾದ ಭಾನುವಾರವೂ ಮುಂದುವರೆದಿದೆ.
ಸಿಐಟಿಯು ಬೆಂಬಲದೊಂದಿಗೆ ನಗರಸಭೆಯಲ್ಲಿ ಗುತ್ತಿಗೆ ಆಧಾರದದಲ್ಲಿ ಕಾರ್ಯ ನಿರ್ವಹಿಸುವ ಜಲಗಾರರು ತಮ್ಮ ಹದಿನೈದು ತಿಂಗಳ ವೇತನ ಸೇರಿದಂತೆ ಸಮಾನ ಕೆಲಸ ಸಮಾನ ವೇತನಕ್ಕಾಗಿ ಆಗ್ರಹಿಸಿ ನವೆಂಬರ್ ೨ ರ ಶುಕ್ರವಾರದಿಂದ ನಡೆಸುತ್ತಿರುವ ಹೋರಾಟ ಹತ್ತನೇ ದಿನವೂ ಮುಂದುವರೆದಿದೆ.
ಕಳೆದ ಹದಿನೈದು ತಿಂಗಳ ತಮ್ಮ ವೇತನ ಪಾವತಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಹೋರಾಟಕ್ಕೆ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ಸಕಾರವಾಗಿ ಸ್ಪಂದಿಸುತ್ತಿಲ್ಲ. ನ್ಯಾಯಯುತವಾಗಿ ನಮ್ಮ ವೇತನ ಪಾವತಿಸಿ ಎಂದಷ್ಟೇ ಕೇಳುತ್ತಿದ್ದೇವಾದರೂ ೨ ತಿಂಗಳು ಸಂಬಳ ಹಾಕುತ್ತೇವೆ, ನಾಲ್ಕು ತಿಂಗಳ ಸಂಬಳ ಹಾಕುತ್ತೇವೆ ಎಂದು ಹೇಳುವ ಮೂಲಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಲ ಕಳೆಯುತ್ತಿದ್ದಾರೆ.
ಕಳೆದ ಹದಿನೈದು ತಿಂಗಳ ಕಾಲ ವೇತನವಿಲ್ಲದೇ ದುಡಿದ ನಮ್ಮಲ್ಲಿ ಹೋರಾಟ ಮಾಡಲು ಸಹ ಆರ್ಥಿಕ ಶಕ್ತಿ ಇಲ್ಲದಾಗಿದೆ. ಹಾಗಾಗಿ ಪ್ರತಿಭಟನೆ ಸ್ಥಳದಲ್ಲಿ ನಿಧಿ ಸಂಗ್ರಹಿಸಲು ಮುಂದಾಗಿದ್ದು ನಮ್ಮ ಭೇಡಿಕೆ ಈಡೇರುವವರೆಗೂ ಅನಿರ್ಧಿಷ್ಟ ಹೋರಾಟ ಮಾಡಲು ನಾಗರಿಕರು ನಿಧಿ ಸಂಗ್ರಹ ಪೆಟ್ಟಿಗೆಯಲ್ಲಿ ತಮ್ಮ ಕೈಲಾದ ಆರ್ಥಿಕ ಸಹಾಯ ಮಾಡುವ ಮೂಲಕ ನಮಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಜಲಗಾರ ನಾಗರಾಜ್ ಮನವಿ ಮಾಡಿದ್ದಾರೆ.
ಸಿ.ಐ.ಟಿ.ಯು ಅಧ್ಯಕ್ಷ ಸುದರ್ಶನ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಸುಬ್ರಮಣಿ, ಭಕ್ತರಹಳ್ಳಿ ನಾರಾಯಣಸ್ವಾಮಿ, ಬಿಸಿಯೂಟ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಮಂಜುಳಾ, ಗ್ರಾಮ ಪಂಚಾಯಿತಿ ನೌಕರರ ಸಂಘದ ಗೌರವಾಧ್ಯಕ್ಷೆ ಮಧುಲಾತಾ, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಮಂಜುಳಾ, ಗ್ರಾಮ ಪಂಚಾಯಿತಿ ನೌಕರರ ಸಂಘದ ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್, ಚೀಮಂಗಲ ಹರೀಶ್, ಕುಂಬಿಗಾನಹಳ್ಳಿ ಅಶ್ವತ್ಥಪ್ಪ, ಗಂಜಿಗುಂಟೆ ಈರಪ್ಪ, ವೈ ಹುಣಸೇನಹಳ್ಳಿ ದೊಡ್ಡಬೊಮ್ಮಣ್ಣ, ಹಂಡಿಗನಾಳ ಮುನೇಗೌಡ, ಜಲಗಾರರಾದ ಟಿ.ಎನ್.ರವಿ, ರಮೇಶ್, ರಾಜೇಶ್, ಆನಂದ್, ಮಂಜುನಾಥ್, ಮುರಳಿ.ಆರ್, ಬಾಬು, ನವಾಜ್ ಪಾಷಾ, ನವೀನ್ಕುಮಾರ್, ಕೆ.ಶ್ರೀನಿವಾಸ್, ನರಸಿಂಹಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -