ಹತ್ತು ದಿನಗಳ ಉಚಿತ ಕರಾಟೆ ಮತ್ತು ಜಿಮ್ನಾಸ್ಟಿಕ್‌ ಬೇಸಿಗೆ ಶಿಬಿರದ ಸಮಾರೋಪ

- Advertisement -
- Advertisement -

ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಹತ್ತು ದಿನಗಳ ಉಚಿತ ಉಚಿತ ಕರಾಟೆ ಮತ್ತು ಜಿಮ್ನಾಸ್ಟಿಕ್‌ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣಪತ್ರವನ್ನು ನೀಡಿ ದಿವ್ಯ ಭಾರತ್‌ ಕರಾಟೆ ಡೋ ಅಸೋಸಿಯೇಷನ್‌ ಶಿಕ್ಷಕ ಅರುಣ್‌ ಕುಮಾರ್‌ ಮಾತನಾಡಿದರು.
ಕಲಿಕೆ ನಿರಂತರವಾದದ್ದು. ನಾವು ಕಲಿತದ್ದನ್ನು ಇತರರಿಗೆ ಕಲಿಸಿದರೆ ನಮ್ಮಲ್ಲಿನ ವಿದ್ಯೆ ಇನ್ನೂ ಹೆಚ್ಚುತ್ತದೆ ಎಂದು ಅವರು ತಿಳಿಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳು ಕೇವಲ ಟೀವಿ ನೋಡುತ್ತಾ ಕಾಲಕಳೆಯಬಾರದು. ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯಪೂರ್ಣ ಮನಸ್ಸು ಮತ್ತು ಶರೀರ ಹೊಂದಬೇಕು ಎಂಬ ಉದ್ದೇಶದಿಂದ ಉಚಿತವಾಗಿ ಹತ್ತು ದಿನಗಳ ಕಾಲ ಕರಾಟೆ ಮತ್ತು ಜಿಮ್ನಾಸ್ಟಿಕ್‌ ಶಿಬಿರವನ್ನು ಆಯೋಜಿಸಿದ್ದೆವು. ನೂರಕ್ಕೂ ಹೆಚ್ಚು ಮಕ್ಕಳು ಶಿಬಿರದಲ್ಲಿ ಭಾಗವಹಿಸಿದ್ದರು. ಪ್ರತಿಯೊಬ್ಬ ಮಗುವೂ ತಾವು ಕಲಿತದ್ದನ್ನು ಅಭ್ಯಾಸ ಮಾಡುತ್ತಾ ತಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡಿದ್ದ 120 ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಕಲಾವಿದ ಮುನಿರಾಜು, ಬಸವರಾಜು, ಮುರಳಿ, ಮಣಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!